Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:23 - ಕನ್ನಡ ಸತ್ಯವೇದವು C.L. Bible (BSI)

23 “ಸುಗಂಧ ದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಆರು ಕಿಲೋಗ್ರಾಂ ಅಚ್ಚರಕ್ತಬೋಳ, ಮೂರು ಕಿಲೋಗ್ರಾಂ ಶ್ರೇಷ್ಠವಾದ ಲವಂಗಚಕ್ಕೆ, ಮೂರು ಕಿಲೋಗ್ರಾಂ ಸುಗಂಧವಾದ ಬಜೆ ಹಾಗು ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಮುಖ್ಯವಾದ ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ತೊಲೆ ಅಚ್ಚ ರಕ್ತಬೋಳ, ಇನ್ನೂರೈವತ್ತು ತೊಲೆ ಶ್ರೇಷ್ಠವಾದ ಲವಂಗಚಕ್ಕೆ, ಇನ್ನೂರೈವತ್ತು ತೊಲೆ ಸುಗಂಧವಾದ ಬಜೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚ ರಕ್ತಬೋಳ, ಅದರ ಅರ್ಧದಷ್ಟು ಅಂದರೆ ಆರು ಪೌಂಡು ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:23
20 ತಿಳಿವುಗಳ ಹೋಲಿಕೆ  

“ವೆದಾನಿನವರೂ, ಯಾವಾನಿನವರೂ ಉಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸುತ್ತಿದ್ದರು. ಉಕ್ಕು, ಬಜೆ, ಲವಂಗ, ಚಕ್ಕೆಗಳು ನಿನಗೆ ಆಮದಾಗುತ್ತಿದ್ದವು.


ಬೆಳೆದಿವೆ ಪಟ್ಟೆಲವಂಗ ವಿವಿಧ ಸಾಂಬ್ರಾಣಿ ಗಿಡಗಳು ರಸಗಂಧ, ಅಗರುಗಳು ಸಕಲವಿಧ ಶ್ರೇಷ್ಠ ಸುಗಂಧ ಗಿಡಮೂಲಿಕೆಗಳು.


ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ, ಮುಖ್ಯ ಮುಖ್ಯ ಸುಗಂಧದ್ರವ್ಯ, ಸಮಸ್ತ ಅಮೂಲ್ಯರತ್ನ, ಈ ವಸ್ತುಗಳನ್ನು ನಿನಗಾಗಿ ತರುತ್ತಿದ್ದರು.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ನನ್ನ ಭಾಗ್ಯಕ್ಕೆ ನನ್ನ ನಲ್ಲ ಸ್ತನಗಳ ಮಧ್ಯೆಯಿರುವ ಪರಿಮಳ ಚೀಲ.


ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.


ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ.


ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II


ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.


ಜಾಲೀಮರ, ದೀಪಕ್ಕೆ ಬೇಕಾದ ಎಣ್ಣೆ, ಅಭಿಷೇಕ ತೈಲಕ್ಕೆ ಹಾಗು ಪರಿಮಳ ಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,


ಇದೂ ಅಲ್ಲದೆ ಸರ್ವೇಶ್ವರ ಮೋಶೆಗೆ ಇಂತೆಂದರು:


ಅದಕ್ಕೆ ನಾಲ್ಕು ಲೀಟರು ಓಲಿವ್ ಎಣ್ಣೆಯನ್ನು ಕೂಡಿಸಬೇಕು.


ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ದೀಪಕ್ಕೆ ಬೇಕಾದ ಎಣ್ಣೆಯನ್ನು, ಅಭಿಷೇಕ ತೈಲಕ್ಕೆ ಮತ್ತು ಪರಿಮಳ ಧೂಪಕ್ಕೆ ಬೇಕಾದ ಸುಗಂಧ ದ್ರವ್ಯಗಳನ್ನು ತಂದುಕೊಟ್ಟರು.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಯಾಜಕ ಚಾದೋಕನು ದೇವದರ್ಶನದ ಗುಡಾರದಲ್ಲಿದ್ದ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದುತ್ತಾ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ!” ಎಂದು ಘೋಷಿಸಿದರು.


ಆದರೆ ಪರಿಮಳದ್ರವ್ಯಗಳನ್ನು ಮಿಶ್ರಮಾಡುವ ಜವಾಬ್ದಾರಿ ಯಾಜಕರದಾಗಿತ್ತು.


ನನಗೋಸ್ಕರ ನೀನು ಹಣ ತೆತ್ತು ಅಗರಬತ್ತಿ ತರಲಿಲ್ಲ ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಬದಲಿಗೆ ನನ್ನನ್ನು ಪೀಡಿಸಿರುವೆ ನಿನ್ನ ಪಾಪಗಳಿಂದ ಬೇಸರಗೊಳಿಸಿರುವೆ ನನ್ನನು ನಿನ್ನ ದೋಷಗಳಿಂದ.


ಮಹಾಯಾಜಕ ಆರೋನನ ಮಗ ಎಲ್ಲಾಜಾರನು ದೀಪದ ಎಣ್ಣೆಯನ್ನು, ಪರಿಮಳ ಧೂಪವನ್ನು, ಅನುದಿನ ನೈವೇದ್ಯ ಮಾಡುವ ಧಾನ್ಯದ್ರವ್ಯಗಳನ್ನು ಹಾಗೂ ಅಭಿಷೇಕ ತೈಲವನ್ನು ತನ್ನ ವಶದಲ್ಲೇ ಇಟ್ಟುಕೊಳ್ಳಬೇಕು. ದೇವದರ್ಶನದ ಗುಡಾರದ ಎಲ್ಲ ಭಾಗಗಳು, ಅದರಲ್ಲಿರುವ ಸಮಸ್ತ ವಸ್ತುಗಳು ಪಾತ್ರೆಪರಿಕರಗಳು ಹಾಗೂ ಅವುಗಳಲ್ಲಿರುವುದೆಲ್ಲವೂ ಅವನ ಮೇಲ್ವಿಚಾರಣೆಯಲ್ಲಿರಬೇಕು.


ಇತರರು ಬೇರೆ ಪವಿತ್ರ ಸಲಕರಣೆಗಳಾದ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಹಾಗೂ ಪರಿಮಳ ದ್ರವ್ಯಗಳ ಸರಬರಾಜು ಮಾಡುವ ಜವಾಬ್ದಾರಿಕೆ ಹೊಂದಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು