Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:33 - ಕನ್ನಡ ಸತ್ಯವೇದವು C.L. Bible (BSI)

33 ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:33
27 ತಿಳಿವುಗಳ ಹೋಲಿಕೆ  

ಕೇವಲ ಸುವಾಸನೆಗಾಗಿ ಅಂಥದ್ದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.


ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.


ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.


ಯಾವನಾದರು ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.


ಆ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತರದಿದ್ದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು


ಅವರನ್ನು ಯಾಜಕ ಪದವಿಗೆ ಸೇರಿಸುವುದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳನ್ನು ಪಾಪಪರಿಹಾರಕ್ಕಾಗಿ ಸಮರ್ಪಿಸಲಾದುವೋ ಅವುಗಳನ್ನು ಅವರೇ ಭೋಜನ ಮಾಡಬೇಕು. ಇತರರು ಅವುಗಳನ್ನು ತಿನ್ನಕೂಡದು. ಏಕೆಂದರೆ ಅವು ಮೀಸಲಾದುವು.


ಏಳು ದಿನ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಿರಲಿ, ಸ್ವದೇಶದವನಾಗಿರಲಿ ಇಸ್ರಯೇಲ್ ಜನರಿಂದ ಬಹಿಷ್ಕೃತನು.


ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ


ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.


“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.


ಏಕೆಂದರೆ ಪ್ರತಿ ದೇಹಕ್ಕೂ ರಕ್ತವೇ ಪ್ರಾಣಾಧಾರ. ಆದಕಾರಣ ಸರ್ವೇಶ್ವರ ಇಸ್ರಯೇಲರಿಗೆ, ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದ್ದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರ ಹಾಕಬೇಕು,’ ಎಂದು ಆಜ್ಞಾಪಿಸಿದ್ದಾರೆ.


ಯಾರಾದರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನು ಮಾಡಿದ್ದೇ ಆದರೆ ಅವನನ್ನು ಕುಲದಿಂದ ತೆಗೆದುಬಿಡಬೇಕು.


ಅವನು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿ ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತಂದಿದ್ದಾನೆ. ಆದ್ದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ನನ್ನ ಜನತೆಯಿಂದ ತೆಗೆದುಹಾಕುವೆನು.


ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದ್ದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.


ಅವರಿಗೆ ಹೀಗೆಂದು ವಿಧಿಸು: ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರು ಅಶುದ್ಧನಾಗಿರುವಾಗ ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಮೀಸಲೆಂದು ಸಮರ್ಪಿಸುವ ಕಾಣಿಕೆಗಳ ಬಳಿಗೆ ಬಂದರೆ ಅವನನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕಬೇಕು. ನಾನು ಸರ್ವೇಶ್ವರ.


“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿ.


ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.


ಸರ್ವೇಶ್ವರನ ಮಾತನ್ನು ತಾತ್ಸಾರ ಮಾಡಿ, ಅವರ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಅಂಥವನಿಗೆ ಬಹಿಷ್ಕಾರ ಹಾಕಲೇಬೇಕು. ಅವನು ತನ್ನ ಪಾಪದ ದುಷ್ಪಲವನ್ನು ಅನುಭವಿಸುವಂತಾಗಬೇಕು.


ಮನುಷ್ಯನ ಶವ ಸೋಂಕಿದವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಅವನು ಸರ್ವೇಶ್ವರನ ಗುಡಾರವನ್ನು ಅಪವಿತ್ರಪಡಿಸುತ್ತಾನೆ. ಅಂಥವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣ ನೀರನ್ನು ಅವನ ಮೇಲೆ ಚಿಮುಕಿಸದೆ ಇರುವ ಕಾರಣ ಅವನು ಮಡಿಗೆಟ್ಟವನು; ಅವನಿಗುಂಟಾದ ಮೈಲಿಗೆ ಅವನಲ್ಲಿ ಉಳಿದಿರುತ್ತದೆ.


ಮಡಿಗೆಟ್ಟು ದೋಷಪರಿಹಾರ ಮಾಡಿಕೊಳ್ಳದವನು ಸರ್ವೇಶ್ವರನ ದೇವಸ್ಥಾನವನ್ನು ಅಪವಿತ್ರಗೊಳಿಸುತ್ತಾನೆ. ಆದಕಾರಣ ಅಂಥವನಿಗೆ ಸಭೆಯಿಂದ ಬಹಿಷ್ಕಾರ ಹಾಕಬೇಕು. ಶುದ್ಧೀಕರಣ ಜಲವನ್ನು ತನ್ನ ಮೇಲೆ ಚಿಮುಕಿಸಿಕೊಳ್ಳದೆ ಹೋದುದರಿಂದ ಅವನು ಮಡಿಗೆಟ್ಟವನಾಗಿಯೇ ಇರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು