Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:6 - ಕನ್ನಡ ಸತ್ಯವೇದವು C.L. Bible (BSI)

6 ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಜ್ಞಾಶಾಸನಗಳ ಮಂಜೂಷದ ಮುಂದಣ ತೆರೆಗೆ ಎದುರಾಗಿ, ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:6
16 ತಿಳಿವುಗಳ ಹೋಲಿಕೆ  

ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,


ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,


ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಮಂಜೂಷದ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇಡು.


ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.


ಸರ್ವೇಶ್ವರ ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಕೆಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು


ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.


ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನ ಗುಡಾರದೊಳಗೆ ಆಜ್ಞಾಶಾಸನಗಳಿರುವ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.


ಆ ಗುದಿಗೆಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.


ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.


ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು