Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:14 - ಕನ್ನಡ ಸತ್ಯವೇದವು C.L. Bible (BSI)

14 ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪರಿಶುದ್ಧವಾದದ್ದೆಂದು ಎಣಿಸಿ ನಡೆದವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಕೆಲಸವೇನಾದರೂ ಮಾಡುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “‘ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:14
17 ತಿಳಿವುಗಳ ಹೋಲಿಕೆ  

ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.


ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.


“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.


ಕಲಿಸಿದಿರಿ ಅವರಿಗೆ ಆಜ್ಞಾವಿಧಿ ಧರ್ಮಗಳನು ಪ್ರಕಟಿಸಿದಿರಿ ನಿಮಗೆ ಮೀಸಲಾದ ವಿಶ್ರಾಂತಿ ದಿನವನು; ನಿಮ್ಮ ದಾಸ ಮೋಶೆಯ ಮುಖಾಂತರ ಸಾಧಿಸಿದಿರಿದನು.


ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.


ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿ ಮಾಡಬಹುದಾದರೆ ಅದೇ ಸಬ್ಬತ್ ದಿನದಲ್ಲಿ ನಾನು ಒಬ್ಬ ಮನುಷ್ಯನನ್ನು ಸಂಪೂರ್ಣ ಸ್ವಸ್ಥಪಡಿಸಿದ್ದಕ್ಕೆ ನೀವು ಸಿಟ್ಟಾಗಬೇಕೆ?


ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.


ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ಕೇವಲ ಸುವಾಸನೆಗಾಗಿ ಅಂಥದ್ದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು