Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:17 - ಕನ್ನಡ ಸತ್ಯವೇದವು C.L. Bible (BSI)

17 ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನಗೂ ಇಸ್ರಾಯೇಲ್ಯರಿಗೂ ನಡುವೆ ಇದು ಸದಾಕಾಲವೂ ಗುರುತು. ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೆ ವಿಶ್ರವಿುಸಿಕೊಂಡನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಬ್ಬತ್ ನನಗೂ ಮತ್ತು ಇಸ್ರೇಲರಿಗೂ ನಡುವೆ ಎಂದೆಂದೂ ಇರುವ ಸೂಚನೆಯಾಗಿರುವುದು.’” ಯೆಹೋವನು ಆರು ದಿನಗಳಲ್ಲಿ ಕೆಲಸಮಾಡಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದನು. ಏಳನೆಯ ದಿನದಲ್ಲಿ ಕೆಲಸ ಮಾಡದೆ ವಿಶ್ರಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನಗೂ, ಇಸ್ರಾಯೇಲರಿಗೂ ಇದೇ ಶಾಶ್ವತವಾದ ಗುರುತು. ಏಕೆಂದರೆ ಆರು ದಿವಸಗಳಲ್ಲಿ ಯೆಹೋವ ದೇವರು ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸ ನಿಲ್ಲಿಸಿ, ವಿಶ್ರಮಿಸಿಕೊಂಡರು ಎಂದು ಹೇಳು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:17
13 ತಿಳಿವುಗಳ ಹೋಲಿಕೆ  

ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿಪಡೆದಂತೆ ದೇವರ ವಿಶ್ರಾಂತಿಯನ್ನು ಪಡೆದವನು ಸಹ ತನ್ನ ಕೆಲಸಕಾರ್ಯಗಳನ್ನು ಮುಗಿಸಿ ವಿಶ್ರಾಂತಿಯನ್ನು ಪಡೆಯುತ್ತಾನೆ.


ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವುವು’ ಎಂದು ಹೇಳಿದೆ.


ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.


ಸ್ವಾಮಿದೇವನ ಮಹಿಮೆಯಿರಲಿ ಶಾಶ್ವತವಾಗಿ I ಆತ ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II


ಭೂಮಿಗೆ ಮೂಲೆಗಲ್ಲನು ಹಾಕಿದವನಾರು? ಅದರ ಅಡಿಗಲ್ಲು ಯಾವುದರ ಮೇಲೆ ನಿಂತಿದೆ?”


ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ಆದುದರಿಂದ ಇಸ್ರಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆ ಅವರಿಗೂ ಅವರ ಪೀಳಿಗೆಗೂ ಶಾಶ್ವತವಾದ ಒಂದು ನಿಬಂಧನೆ.


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು