Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:2 - ಕನ್ನಡ ಸತ್ಯವೇದವು C.L. Bible (BSI)

2 “ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ ಚಿನ್ನ ಬೆಳ್ಳಿ ತಾಮ್ರಗಳಿಂದ ಕೆಲಸ ನಡಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಾನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದೇನೆ. ಊರಿಯು ಹೂರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:2
14 ತಿಳಿವುಗಳ ಹೋಲಿಕೆ  

“ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.


ಮೋಶೆ ಇಸ್ರಯೇಲರಿಗೆ ಹೀಗೆಂದನು: “ಸರ್ವೇಶ್ವರ ಸ್ವಾಮಿ ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಹೆಸರಿಸಿ ಆಯ್ಕೆ ಮಾಡಿದ್ದಾರೆ. ನಯನವಿರಾದ ಕೆಲಸಗಳನ್ನು ನಿಯೋಜಿಸುವುದಕ್ಕೂ,


ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.


ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.


ಅದಕ್ಕೆ ಸರ್ವೇಶ್ವರ, “ನಿನ್ನ ಕೋರಿಕೆಯಂತೆ ಮಾಡುವೆನು. ಏಕೆಂದರೆ ನೀನು ನನ್ನ ಅನುಗ್ರಹಕ್ಕೆ ಪಾತ್ರನು; ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ,” ಎಂದು ಮೋಶೆಗೆ ಹೇಳಿದರು.


ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.


ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡಲು ಹೊರಟನು. ಮೋಶೆ, ಆರೋನ ಹಾಗು ಹೂರ ಈ ಮೂವರು ಗುಡ್ಡದ ತುದಿಗೆ ಏರಿದರು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವನು ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನು.


ಆದರೂ ಊರೀಯನ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿಸಿದ್ದ ತಾಮ್ರದ ಬಲಿಪೀಠ, ಅಲ್ಲೇ ಗಿಬ್ಯೋನಿನಲ್ಲಿ ಸರ್ವೇಶ್ವರನ ಗುಡಾರದ ಮುಂದೆ ಇತ್ತು. ಈ ಕಾರಣ ಸೊಲೊಮೋನನೂ ಅವನ ಸಮಾಜದವರೂ ಅಲ್ಲಿಗೆ ದರ್ಶನಕ್ಕಾಗಿ ಹೋಗುತ್ತಿದ್ದರು.


ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು. ಇವನು ಶಿಲ್ಪಕಲೆ ಬಲ್ಲವನು. ಕಲಾತ್ಮಕ ಕೆಲಸವನ್ನು ನಿಯೋಜಿಸುವವನು ಮತ್ತು ನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸಮಾಡುವವನು.


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು