Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:14
20 ತಿಳಿವುಗಳ ಹೋಲಿಕೆ  

ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.


ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II


ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.


ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು,


ಅದಕ್ಕೆ ಸರ್ವೇಶ್ವರ, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಕ್ಷಮಿಸಿದ್ದೇನೆ.


“ನಾನು ಮುಂಚಿನಂತೆ ಹಗಲಿರುಳು ನಲವತ್ತು ದಿನವೂ ಬೆಟ್ಟದ ಮೇಲೆ ಇದ್ದೆ. ಸರ್ವೇಶ್ವರ ಆ ಕಾಲದಲ್ಲೂ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.


ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.


ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.


ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II


ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ಒಡೆಯರಾದ ಸರ್ವೇಶ್ವರ ಇದನ್ನು ಕೇಳಿ ಮನಮರುಗಿ: “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು