Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:19 - ಕನ್ನಡ ಸತ್ಯವೇದವು C.L. Bible (BSI)

19 ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:19
20 ತಿಳಿವುಗಳ ಹೋಲಿಕೆ  

ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಕೂಡಲೆ ಜುದೇಯ ಮತ್ತು ಇಸ್ರಯೇಲ್ ನಡುವೆ ಇದ್ದ ಸೋದರ ಸಂಬಂಧವನ್ನು ಮುರಿಯಬೇಕೆಂದು ‘ಐಕ್ಯ’ವೆಂಬ ನನ್ನ ಎರಡನೇ ಕೋಲನ್ನು ಮುರಿದುಬಿಟ್ಟೆ.


ಸಂತೋಷವು ನಮ್ಮ ಹೃದಯದಿಂದ ಮಾಯವಾಗಿದೆ ನಮ್ಮ ನಾಟ್ಯನಲಿವು ದುಃಖಕರವಾಗಿ ಮಾರ್ಪಟ್ಟಿದೆ.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.


ಅವರಲ್ಲಿ ಕೆಲವರು ವಿಗ್ರಹಾರಾಧಕರಾದಂತೆ ನಾವು ಆಗಬಾರದು. ಇವರನ್ನು ಕುರಿತೇ : “ತಿನ್ನಲೆಂದು ಕುಡಿಯಲೆಂದು ಕುಳಿತರು ಕುಣಿಯಲೆಂದು ಕಾಮವೆದ್ದು ನಿಂತರು ಈ ಜನರು” - ಎಂದು ಬರೆದಿದೆ.


ಅದಕ್ಕೆ ಮೋಶೆ, ನನಗೆ ಕೇಳಿಸುವುದು ವಿಜಯ ಗೀತೆಯಲ್ಲ ಅದು ಅಪಜಯದ ಶೋಕ ಗೀತೆಯೂ ಅಲ್ಲ ಕೇಳಿಸುತ್ತಿದೆ ನನಗೆ ಸಂಗೀತ ಶ್ಲೋಕ.


ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನು ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದುಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು.


ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II


ನೀನು ಒಡೆದುಬಿಟ್ಟ ಆ ಮೊದಲಿನ ಹಲಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕು’ ಎಂದು ಆಜ್ಞಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು