Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:25 - ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವದಕ್ಕೆ ಆರೋನನು ಅವರನ್ನು ಬಿಟ್ಟದ್ದರಿಂದ ಅವರ ವಿರೋಧಿಗಳು ಅಪಹಾಸ್ಯ ಮಾಡುವದಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೋಶೆಯು ಜನರು ಕ್ರಮವಿಲ್ಲದಿರುವುದನ್ನು ಕಂಡನು. ಆರೋನನು ಅವರನ್ನು ಮಿತಿಮೀರಿ ಇಷ್ಟಬಂದಂತೆ ಮಾಡುವದಕ್ಕೆ ಅವಕಾಶ ಮಾಡಿಕೊಟ್ಟದ್ದರಿಂದ ಅವರ ವೈರಿಗಳ ಮುಂದೆ ಅಪಹಾಸ್ಯಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:25
17 ತಿಳಿವುಗಳ ಹೋಲಿಕೆ  

ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”


“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”


ಶಾಫೀರಿನವರೇ, ಬೆತ್ತಲೆಯಾಗಿ ಲಜ್ಜೆಗೆಟ್ಟು ತೊಲಗಿರಿ. ಚಾನಾನಿನವರಿಗೆ ಹೊರಬರಲು ಧೈರ್ಯವಿಲ್ಲ. ಬೇತೇಲಿನವರ ಗೋಳಾಟ ಕೇಳಿಬಂದಾಗ, ಅಲ್ಲಿ ನಿಮಗೆ ಆಶ್ರಯವಿಲ್ಲವೆಂದು ಗೊತ್ತಾಗುವುದು.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ ಸರ್ವೇಶ್ವರನಿಗೆ ದ್ರೋಹಮಾಡಿದ ಇಸ್ರಯೇಲ ಅರಸ ಅಹಾಜನ ನಿಮಿತ್ತ ಸರ್ವೇಶ್ವರ ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದ್ದರು.


ಅದಲ್ಲದೆ, ಸರ್ವೇಶ್ವರ ಆರೋನನ ಮೇಲೆ ಬಹಳ ಸಿಟ್ಟುಗೊಂಡು, ಅವನನ್ನೂ ನಾಶಮಾಡಬೇಕೆಂದಿದ್ದರು. ಆದುದರಿಂದ ನಾನು ಅವನ ಪರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆ.


ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು.


ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು.


ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.


ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು