Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:27 - ಕನ್ನಡ ಸತ್ಯವೇದವು C.L. Bible (BSI)

27 ಮೋಶೆ ಅವರಿಗೆ, “ಇಸ್ರಯೇಲರ ದೇವರಾದ ಸರ್ವೇಶ್ವರನ ಅಪ್ಪಣೆ ಇದು: ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ನಡುವೆ ಒಂದು ಬಾಗಿಲಿನಿಂದ ಇನ್ನೊಂದು ಬಾಗಿಲಿನವರೆಗೆ ಹೋಗುತ್ತಾ ಬರುತ್ತಾ ಅಣ್ಣ-ತಮ್ಮ, ಗೆಳೆಯ-ನೆರೆಯವ ಎಂದು ಲಕ್ಷಿಸದೆ ಈ ಜನರನ್ನು ಸಂಹರಿಸಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮೋಶೆ ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನು ಅಪ್ಪಣೆಮಾಡುವದೇನಂದರೆ - ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಲಿನಿಂದ ಮತ್ತೊಂದು ಬಾಗಲಿನವರೆಗೂ ಹೋಗುತ್ತಾ ಬರುತ್ತಾ ಅಣ್ಣ ತಮ್ಮ ಗೆಳೆಯ ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಮೋಶೆ ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದನ್ನು ನಿಮಗೆ ತಿಳಿಸುತ್ತೇನೆ: ‘ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ತೆಗೆದುಕೊಂಡು ಪಾಳೆಯದ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೆ ಹೋಗಿ ಜನರನ್ನು ಶಿಕ್ಷಿಸಬೇಕು. ನಿಮ್ಮ ಸಹೋದರರಾಗಿದ್ದರೂ ಸ್ನೇಹಿತರಾಗಿದ್ದರೂ ಅಥವಾ ನೆರೆಯವರಾಗಿದ್ದರೂ ಸರಿ, ಕೊಲ್ಲಿರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’ ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:27
12 ತಿಳಿವುಗಳ ಹೋಲಿಕೆ  

ಅಂತೆಯೇ ಮೋಶೆ ಇಸ್ರಯೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳ್ ದೇವತೆಗೆ ಪೂಜಿಸುವ ತನ್ನ ತನ್ನ ವಂಶದವರಿಗೆ ಪ್ರಾಣಶಿಕ್ಷೆಯನ್ನು ವಿಧಿಸಬೇಕು,” ಎಂದು ಆಜ್ಞಾಪಿಸಿದನು.


“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಮೋಶೆ ಆ ಲೇವಿಯರಿಗೆ, “ಈದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.


ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು.


ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.


ದಹನಬಲಿಯನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ, “ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು,” ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿದರು.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು