Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:29 - ಕನ್ನಡ ಸತ್ಯವೇದವು C.L. Bible (BSI)

29 ಮೋಶೆ ಆ ಲೇವಿಯರಿಗೆ, “ಈದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೋಶೆಯು ಲೇವಿಯರಿಗೆ, “ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಸಹೋದರರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೇ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಂಡಿದ್ದೀರಿ. ಆದುದರಿಂದ ಆತನು ಈ ದಿನ ನಿಮ್ಮನ್ನು ಆಶೀರ್ವದಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೋಶೆ [ಲೇವಿಯರಿಗೆ] - ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಳ್ಳಬೇಕು; ಹಾಗಾದರೆ ಆತನು ಈ ಹೊತ್ತೇ ನಿಮ್ಮನ್ನು ಆಶೀರ್ವದಿಸುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡುಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:29
11 ತಿಳಿವುಗಳ ಹೋಲಿಕೆ  

“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.


ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.


ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.


ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.


ಎಲ್ಲ ಇಸ್ರಯೇಲರಿಗೆ ಉಪದೇಶಿಸತಕ್ಕವರೂ ಸರ್ವೇಶ್ವರನಿಗೆ ಪ್ರತಿಷ್ಠರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಯೇಲ್ ಅರಸನೂ ಆದ ಸೊಲೊಮೋನನು ಕಟ್ಟಿಸಿದ ಮಹಾದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿ; ಅದನ್ನು ಹೆಗಲ ಮೇಲೆ ಹೊತ್ತುಕೊಳ್ಳುವುದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಸರ್ವೇಶ್ವರನಿಗೂ ಅವರ ಪ್ರಜೆಗಳಾದ ಇಸ್ರಯೇಲರಿಗೂ ಸೇವೆಸಲ್ಲಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು