Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:33 - ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಸರ್ವೇಶ್ವರ, “ಯಾರ್ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದ್ದಾರೋ ಅವರ ಹೆಸರುಗಳನ್ನೇ ನನ್ನಲ್ಲಿರುವ ಪಟ್ಟಿಯಿಂದ ಅಳಿಸಿಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದಕ್ಕೆ ಯೆಹೋವನು ಮೋಶೆಗೆ, “ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪುಸ್ತಕದಿಂದ ನಾನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದಕ್ಕೆ ಯೆಹೋವನು - ಯಾರಾರು ನನ್ನ ಮಾತನ್ನು ಮೀರಿ ಪಾಪಮಾಡಿದ್ದಾರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪಟ್ಟಿಯಿಂದ ನಾನು ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಯೆಹೋವನು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡುವ ಜನರ ಹೆಸರನ್ನು ಮಾತ್ರವೇ ನನ್ನ ಪುಸ್ತಕದಿಂದ ಅಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದಕ್ಕೆ ಯೆಹೋವ ದೇವರು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:33
13 ತಿಳಿವುಗಳ ಹೋಲಿಕೆ  

ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II


ಯಾವನಾದರು ಆ ದಿನ ಕಿಂಚಿತ್ತಾದರು ದುಡಿದರೆ ಅವನನ್ನು ಇಸ್ರಯೇಲರಿಂದ ಅಳಿಸಿಬಿಡುವೆನು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.


ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.


ದೇವಾ, ನಾ ನೊಂದುಬೆಂದಿಹೆನಯ್ಯಾ I ಉದ್ಧರಿಸಿ ನನ್ನನು ಕಾಪಾಡಯ್ಯಾ II


ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು