Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:17 - ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಸರ್ವೇಶ್ವರ, “ನಿನ್ನ ಕೋರಿಕೆಯಂತೆ ಮಾಡುವೆನು. ಏಕೆಂದರೆ ನೀನು ನನ್ನ ಅನುಗ್ರಹಕ್ಕೆ ಪಾತ್ರನು; ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ,” ಎಂದು ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಯೆಹೋವನು ಮೋಶೆಗೆ, “ನಿನ್ನ ಕೋರಿಕೆಯನ್ನು ಅನುಗ್ರಹಿಸುತ್ತೇನೆ. ನಾನು ನಿನ್ನನ್ನು ಮೆಚ್ಚಿಕೊಂಡದ್ದರಿಂದಲೇ ಇದನ್ನು ಮಾಡುತ್ತೇನೆ. ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:17
11 ತಿಳಿವುಗಳ ಹೋಲಿಕೆ  

ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.


ಅದಕ್ಕಾತನು, “ಸರಿ, ಹಾಗೆಯೇ ಆಗಲಿ, ಈ ನಿನ್ನ ಕೋರಿಕೆಯನ್ನೂ ನೆರವೇರಿಸುತ್ತೇನೆ, ನೀನು ಹೇಳಿದ ಆ ಊರನ್ನು ಹಾಳುಮಾಡುವುದಿಲ್ಲ.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.


ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು.


ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು.


ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.


ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.


ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು