Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:5 - ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದದ್ದೇನಂದರೆ - ನೀವು ನನ್ನ ಆಜ್ಞೆಗಳಿಗೆ ಬೊಗ್ಗದವರೇ. ನಾನು ಒಂದು ಕ್ಷಣಮಾತ್ರ ನಿಮ್ಮ ಮಧ್ಯದಲ್ಲಿ ಬರುವದಾದರೆ ನೀವು ನಿರ್ಮೂಲವಾಗಿ ಹೋದೀರಿ, ನೋಡಿಕೊಳ್ಳಿರಿ. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ ನಿಮಗೆ ನಾನು ಏನು ಮಾಡಬೇಕೆಂಬದನ್ನು ಆಲೋಚಿಸಿಕೊಳ್ಳುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:5
16 ತಿಳಿವುಗಳ ಹೋಲಿಕೆ  

“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ನನಗೆ ಮುಟ್ಟಿರುವ ದೂರಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡರು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು.


ಅಂತೆಯೇ ಇಸ್ರಯೇಲರು ಹೋರೆಬ್ ಬೆಟ್ಟದಿಂದೀಚೆಗೆ ಒಡವೆವಸ್ತುಗಳನ್ನು ತೊಟ್ಟುಕೊಳ್ಳದೆ ಇದ್ದರು.


ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.


ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು