Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಹೇಳಿದ್ದೇನಂದರೆ - ನಾನು ಒಂದು ನಿಬಂಧನೆಯನ್ನು ಸ್ಥಾಪಿಸುತ್ತೇನೆ, ಕೇಳು; ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡಿಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವದು ಭಯಂಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋವನು, “ನಾನು ನಿಮ್ಮೊಂದಿಗೆ ಈ ಒಡಂಬಡಿಕೆಯನ್ನು ಮಾಡುತ್ತಿದ್ದೇನೆ. ಭೂಲೋಕದಲ್ಲಿ ಎಲ್ಲಿಯೇ ಆಗಲಿ ಯಾವ ಜನಾಂಗದಲ್ಲಿಯೇ ಆಗಲಿ ಹಿಂದೆಂದೂ ನಡೆಯದಂತ ಮಹತ್ಕಾರ್ಯಗಳನ್ನು ಮಾಡುವೆನು. ಎಲ್ಲಾ ಜನರು ಮತ್ತು ನಿನ್ನೊಂದಿಗಿರುವ ಜನರು ಇವುಗಳನ್ನು ನೋಡಿ ಯೆಹೋವನಾದ ನಾನೇ ಮಹಾ ಮಹಿಮಸ್ವರೂಪನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಯೆಹೋವ ದೇವರು, “ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿಯಲ್ಲಿಯೂ ಯಾವ ಜನಾಂಗದಲ್ಲಿಯೂ ಹಿಂದೆಂದಿಗೂ ಮಾಡದಿರುವಂಥ ಅದ್ಭುತಗಳನ್ನು ನಿನ್ನ ಎಲ್ಲಾ ಜನರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವೆಯೋ ಆ ಜನರೂ ಯೆಹೋವ ದೇವರ ಕಾರ್ಯವನ್ನು ನೋಡುವರು ಏಕೆಂದರೆ ನಾನು ನಿಮಗೆ ಮಾಡುವಂಥದ್ದು ಭಯಂಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:10
28 ತಿಳಿವುಗಳ ಹೋಲಿಕೆ  

ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.


ಅದ್ಭುತಗಳನು ನಡೆಸುವಂತಹ ದೇವ ನೀನೆಮಗೆ I ತೋರ್ಪಡಿಸಿದೆ ನಿನ್ನಾ ಪರಾಕ್ರಮವನು ಜನತೆಗೆ II


ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು.


ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II


ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.


ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.


ಆ ಈಜಿಪ್ಟ್ ದೇಶದೊಳು, ಸೋನ್ ಬಯಲು ಸೀಮೆಯೊಳು I ಆತನೆಸಗಿದ ಪವಾಡಗಳು ಪೂರ್ವಜರ ಇದಿರೊಳು II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಕೂಡಲೆ ಜನರು ಆರ್ಭಟಿಸಿದರು. ಕೊಂಬುಗಳು ಮೊಳಗಿದವು. ಕೊಂಬಿನ ಧ್ವನಿ ಕೇಳಿ ಜನರು ಇನ್ನೂ ಗಟ್ಟಿಯಾಗಿ ಆರ್ಭಟಿಸಿದರು. ನಗರದ ಗೋಡೆ ತಾನಾಗಿ ಬಿದ್ದುಹೋಯಿತು. ಪ್ರತಿ ಒಬ್ಬನೂ ನೆಟ್ಟಗೆ ನಗರಕ್ಕೆ ನುಗ್ಗಿದನು. ಅದು ಅವರ ಸ್ವಾಧೀನವಾಯಿತು.


ಸರ್ವೇಶ್ವರ ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಆಧಾರದ ಮೇಲೆ ನಾನು ನಿನ್ನೊಂದಿಗೂ ಇಸ್ರಯೇಲರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ,” ಎಂದು ಹೇಳಿದರು.


ಜನರು ಸಾರುವರು ನಿನ್ನ ಅದ್ಭುತ ಶಕ್ತಿಯನು I ನಾ ಪ್ರಸಿದ್ಧಪಡಿಸುವೆನು ನಿನ್ನ ಮಹಿಮೆಯನು II


ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II


ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು.


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು