Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:28 - ಕನ್ನಡ ಸತ್ಯವೇದವು C.L. Bible (BSI)

28 ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:28
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನು ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದುಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು.


ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.


“ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ.


“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.


ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದವು. ಅವುಗಳಲ್ಲಿ ಬರೆದಿದ್ದು ದೇವರು ಕೆತ್ತಿದ ಅಕ್ಷರಗಳೇ ಆಗಿದ್ದವು.


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.


ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ.


ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


ನಾಲ್ವತ್ತು ದಿನ ಅಲ್ಲಿದ್ದಾಗ ಅವರನ್ನು ಪರೀಕ್ಷಿಸಲು ಪಿಶಾಚಿ ಪ್ರಯತ್ನಿಸಿತು. ಅಷ್ಟು ದಿನಗಳೂ ಏನನ್ನೂ ತಿನ್ನದೆ ಉಪವಾಸವಿದ್ದ ಯೇಸುವಿಗೆ ಆಗ ಹಸಿವಾಯಿತು.


ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.


“ನಾನು ಮುಂಚಿನಂತೆ ಹಗಲಿರುಳು ನಲವತ್ತು ದಿನವೂ ಬೆಟ್ಟದ ಮೇಲೆ ಇದ್ದೆ. ಸರ್ವೇಶ್ವರ ಆ ಕಾಲದಲ್ಲೂ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.


ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;


ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು