Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:32 - ಕನ್ನಡ ಸತ್ಯವೇದವು C.L. Bible (BSI)

32 ಅನಂತರ ಇಸ್ರಯೇಲರೆಲ್ಲರು ಕೂಡ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಸರ್ವೇಶ್ವರನಿಂದ ಹೊಂದಿದ ಆಜ್ಞೆಗಳನ್ನೆಲ್ಲ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತರುವಾಯ ಇಸ್ರಾಯೇಲ್ಯರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅದಾದನಂತರ, ಇಸ್ರೇಲರೆಲ್ಲರೂ ಮೋಶೆಯ ಬಳಿಗೆ ಬಂದರು. ಯೆಹೋವನು ಸೀನಾಯಿ ಬೆಟ್ಟದಲ್ಲಿ ತನಗೆ ಕೊಟ್ಟ ಆಜ್ಞೆಗಳನ್ನು ಮೋಶೆಯು ಅವರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರ ಬಂದರು. ಆಗ ಅವನು ಅವರಿಗೆ, ಯೆಹೋವ ದೇವರು ತನಗೆ ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳನ್ನೆಲ್ಲಾ ಆಜ್ಞಾಪಿಸಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:32
10 ತಿಳಿವುಗಳ ಹೋಲಿಕೆ  

ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ಈಗ ನನ್ನ ಆಜ್ಞೆಗಳನ್ನೇ ಗಮನದಲ್ಲಿಟ್ಟು ಅವುಗಳನ್ನು ಅನುಸರಿಸಬೇಕು. ಹೀಗೆ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕು.


ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ” ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು.


“ಇಸ್ರಯೇಲರಿಗೆ ಈ ಕಟ್ಟಳೆಗಳನ್ನು ಕೊಡು:


ಆದರೆ ಮೋಶೆ ಅವರನ್ನು ಕರೆದನು. ಆಗ ಆರೋನನು ಹಾಗು ಜನನಾಯಕರೆಲ್ಲರು ಅವನ ಬಳಿಗೆ ಬಂದರು. ಆಗ ಮೋಶೆ ಅವರ ಸಂಗಡ ಮಾತಾಡಿದನು.


ಅವರೊಡನೆ ಮಾತಾಡಿ ಮುಗಿಸಿದ ಮೇಲೆ ಮೋಶೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡನು.


ಮೋಶೆ ಇಸ್ರಯೇಲರ ಸಮಾಜವನ್ನೆಲ್ಲ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಸರ್ವೇಶ್ವರ ಹೀಗೆ ಆಜ್ಞಾಪಿಸಿದ್ದಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು