Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:21 - ಕನ್ನಡ ಸತ್ಯವೇದವು C.L. Bible (BSI)

21 ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾರನ್ನು ಹೃದಯವು ಪ್ರೇರೇಪಿಸಿತೋ, ಯಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಸಮಸ್ತ ಸೇವೆಗಳಿಗಾಗಿಯೂ, ಪವಿತ್ರ ವಸ್ತ್ರಗಳಿಗಾಗಿಯೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾರಾರನ್ನು ಹೃದಯವು ಪ್ರೇರಿಸಿತೋ ಯಾರಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕೋಸ್ಕರವೂ ಅದರ ಸಮಸ್ತ ಸೇವೆಗೋಸ್ಕರವೂ ದೀಕ್ಷಾವಸ್ತ್ರಗಳಿಗೋಸ್ಕರವೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕಾಣಿಕೆ ಕೊಡುವುದಕ್ಕೆ ಯಾರ್ಯಾರು ಬಯಸಿದರೋ ಅವರೆಲ್ಲರೂ ಬಂದು ಯೆಹೋವನಿಗೆ ಕಾಣಿಕೆಯನ್ನು ಅರ್ಪಿಸಿದರು. ಈ ಕಾಣಿಕೆಗಳು ದೇವದರ್ಶನಗುಡಾರ, ಅದರ ಎಲ್ಲಾ ವಸ್ತುಗಳು ಮತ್ತು ವಿಶೇಷ ಬಟ್ಟೆಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೃದಯ ಪ್ರೇರಣೆ ಹೊಂದಿದವರೂ ಸಿದ್ಧಮನಸ್ಸಿನವರೂ ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:21
28 ತಿಳಿವುಗಳ ಹೋಲಿಕೆ  

“ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.


ನಿಪುಣೆಯರಾದ ಬೇರೆ ಮಹಿಳೆಯರು ಆಡಿನ ತುಪ್ಪಟವನ್ನು ನೇಯ್ದು ತಂದುಕೊಟ್ಟರು.


ನೀಲಿ, ಊದ, ಕಡುಗೆಂಪುವರ್ಣಗಳುಳ್ಳ ದಾರಗಳು,


ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.


ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II


ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:


ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.


ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ, ನನ್ನ ದೇವರಾಲಯದ ಮೇಲಣ ಅಭಿಮಾನದಿಂದ ಅದಕ್ಕಾಗಿ ನನ್ನ ಸ್ವಂತ ಸೊತ್ತಿನಿಂದ


“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.


ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


ಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.


ಎಚ್ಚರಗೊಳ್ಳು, ಎಚ್ಚರಗೊಳ್ಳು, ದೆಬೋರಾ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಮಾಡು ನೀ ಗುಣಗಾನ, ಬಾರಾಕನೇ, ಏಳು; ಅಬೀನೋವಮನ ಮಗನೇ, ಏಳು, ಸೆರೆಹಿಡಿದವರನು ನೀ ಸಾಗಿಸಿಕೊಂಡು ಹೋಗು.


ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು;


ಅರಸರೇ, ಕೇಳಿ! ಪ್ರಭುಗಳೇ, ಕಿವಿಗೊಡಿ; ನಾ ಕಟ್ಟುವೆನು ಕವಿತೆಯನು ಸರ್ವೇಶ್ವರನಿಗೆ ನಾ ಭಜಿಸಿ ಹಾಡುವೆನು ಇಸ್ರಯೇಲರಾ ದೇವನಿಗೆ;


ಇದಾದ ಮೇಲೆ ಇಸ್ರಯೇಲರ ಸಮಾಜದವರೆಲ್ಲರು ಮೋಶೆಯ ಹತ್ತಿರದಿಂದ ಹೊರಟುಹೋದರು.


ರತ್ನಗಳಿದ್ದವರು ಅವುಗಳನ್ನು ಸರ್ವೇಶ್ವರನ ಆಲಯದ ಭಂಡಾರಕ್ಕಾಗಿ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.


ಗೋತ್ರಪ್ರಧಾನರಲ್ಲಿ ಕೆಲವರು ಜೆರುಸಲೇಮಿನಲ್ಲಿ ಸರ್ವೇಶ್ವರನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದೇ ಸ್ಥಳದಲ್ಲಿ ಕಟ್ಟುವುದಕ್ಕೆ ಕಾಣಿಕೆಗಳನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು