Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:22 - ಕನ್ನಡ ಸತ್ಯವೇದವು C.L. Bible (BSI)

22 ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸಿದ್ಧಚಿತ್ತರಾದ ಗಂಡಸರೂ ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:22
18 ತಿಳಿವುಗಳ ಹೋಲಿಕೆ  

ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು,


ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.


ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,


ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು.


ಜನರೆಲ್ಲರು ತಮ್ಮ ತಮ್ಮ ಕಿವಿಯೋಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದುಕೊಟ್ಟರು.


ಅದಕ್ಕೆ ಆರೋನನು, “ನಿಮ್ಮ ಹೆಂಡತಿಯರು, ಗಂಡುಮಕ್ಕಳು ಹಾಗು ಹೆಣ್ಣುಮಕ್ಕಳು ಹಾಕಿಕೊಂಡಿರುವ ಚಿನ್ನದ ಕಿವಿಯೋಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ,” ಎಂದನು.


ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.


ಯಾರಲ್ಲಿ ನೀಲಿ, ಧೂಮ, ಹಾಗು ರಕ್ತವರ್ಣಗಳುಳ್ಳ ದಾರಗಳು, ನಯವಾದ ನಾರುಬಟ್ಟೆ, ಆಡುಕೂದಲಿನ ಬಟ್ಟೆ, ಹದಮಾಡಿದ ಕೆಂಪುಬಣ್ಣದ ಕುರಿದೊಗಲು ಹಾಗು ಕಡಲುಹಂದಿಯ ತೊಗಲು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ಆಮೇಲೆ ಹಿಜ್ಕೀಯನು ಸಭೆ ಸೇರಿದವರಿಗೆ, “ನೀವು ಈಗ ಸರ್ವೇಶ್ವರನಿಗಾಗಿ ನಿಮ್ಮನ್ನೇ ಪ್ರತಿಷ್ಠಿಸಿಕೊಂಡಿದ್ದೀರಿ; ಹತ್ತಿರ ಬಂದು ಸರ್ವೇಶ್ವರನ ಆಲಯಕ್ಕೆ ಸಮಾಧಾನಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿರಿ,” ಎಂದನು. ಸಭೆ ಸೇರಿದ್ದವರು ಸಮಾಧಾನ ಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವಇಚ್ಛೆಯಿಂದ ದಹನಬಲಿಗಳನ್ನೂ ಸಮರ್ಪಿಸಿದರು.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು