Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:1 - ಕನ್ನಡ ಸತ್ಯವೇದವು C.L. Bible (BSI)

1 “ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆಚಲೇಲನೂ ಒಹೊಲೀಯಾಬನೂ ಎಲ್ಲವನ್ನು ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಮಾಡುವರು; ಮತ್ತು ಬೇರೆ ಜಾಣರೆಲ್ಲರು, ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೋಸ್ಕರ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮತಿಳಿದಿರುವವರು, ಅವರೊಂದಿಗೆ ಕೆಲಸಮಾಡುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಬೆಚಲಯೇಲ್ ಮತ್ತು ಒಹೋಲಿಯಾಬನೂ ಯೆಹೋವ ದೇವರು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡುವರು. ಅವರು ಪರಿಶುದ್ಧಸ್ಥಳದ ಸೇವೆಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಯೆಹೋವ ದೇವರಿಂದ ಜ್ಞಾನ ವಿವೇಕಗಳನ್ನು ಹೊಂದಿದ ಇತರರೊಂದಿಗೆ ಕೆಲಸಮಾಡುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:1
19 ತಿಳಿವುಗಳ ಹೋಲಿಕೆ  

ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.


ಸರ್ವೇಶ್ವರ ಸ್ವಾಮಿ ಮೋಶೆಗ ಆಜ್ಞಾಪಿಸಿದಂತೆ ಆ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನು ಮತ್ತು ಆರೋನನಿಗೆ ದೀಕ್ಷಾವಸ್ತ್ರಗಳನ್ನು ಮಾಡಿದರು.


ನಾನು ಜನರ ಮಧ್ಯೆ ವಾಸಿಸುವುದಕ್ಕೆ ನನಗೊಂದು ಗುಡಾರವನ್ನು ಕಟ್ಟಿಸಬೇಕು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಅಲ್ಲಿ, ಆ ಪವಿತ್ರಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ.


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.


ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು. ಇವನು ಶಿಲ್ಪಕಲೆ ಬಲ್ಲವನು. ಕಲಾತ್ಮಕ ಕೆಲಸವನ್ನು ನಿಯೋಜಿಸುವವನು ಮತ್ತು ನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸಮಾಡುವವನು.


ಹೂರನಿಗೆ ಊರಿಯ ಎಂಬ ಮಗ ಮತ್ತು ಬೆಚಲೇಲ ಎಂಬ ಮೊಮ್ಮಗ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು