Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:2 - ಕನ್ನಡ ಸತ್ಯವೇದವು C.L. Bible (BSI)

2 ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯಾರಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಇಟ್ಟಿದ್ದನೋ ಯಾರಾರನ್ನು ಈ ಕೆಲಸಮಾಡುವದಕ್ಕೆ ಹೃದಯ ಪ್ರೇರಿಸಿತೋ ಆ ಜಾಣರೆಲ್ಲರನ್ನೂ ಮೋಶೆ ತನ್ನ ಹತ್ತಿರಕ್ಕೆ ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೆಚಲಯೇಲನನ್ನು, ಒಹೋಲಿಯಾಬನನ್ನು ಮತ್ತು ಯೆಹೋವ ದೇವರು ಜ್ಞಾನಕೊಟ್ಟಿದ್ದ ಪ್ರತಿಯೊಬ್ಬ ಶಿಲ್ಪಿಯನ್ನೂ ಆ ಕೆಲಸ ಮಾಡುವುದಕ್ಕೆ ಸಿದ್ಧ ಮನಸ್ಸಿದ್ದ ಪ್ರತಿಯೊಬ್ಬನನ್ನೂ ಮೋಶೆಯು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:2
15 ತಿಳಿವುಗಳ ಹೋಲಿಕೆ  

ಅಲ್ಲದೆ, ಪ್ರಧಾನಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆ ಹೊಂದಿದವರಾಗಿರಬೇಕು.


ತನಗೆ ಒಪ್ಪಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂಬುದಾಗಿ ಅರ್ಖಿಪ್ಪನಿಗೆ ತಿಳಿಸಿರಿ.


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಈ ಬೆಳ್ಳಿಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ಉದಾರಹಸ್ತದಿಂದ ಸರ್ವೇಶ್ವರನಿಗಾಗಿ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆ?” ಎಂದು ನೆರೆದ ಸಭೆಯನ್ನು ಕೇಳಿದನು.


“ನಿಮ್ಮಲ್ಲಿರುವ ಶಿಲ್ಪಕಾರರೆಲ್ಲರು ಬಂದು ಸರ್ವೇಶ್ವರನು ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.


ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.


ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.


“ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.


“ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.


ಅವರು ದೇವಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.


ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು.


ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಂತೆಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು