Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:30 - ಕನ್ನಡ ಸತ್ಯವೇದವು C.L. Bible (BSI)

30 ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟವಾಗಿರುವ ಪಟ್ಟವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ತರುವಾಯ ಅವರು ಪವಿತ್ರಕಿರೀಟವನ್ನು ಅಪ್ಪಟ ಬಂಗಾರದಿಂದ ಮಾಡಿದರು. ಅವರು ಬಂಗಾರದಲ್ಲಿ ಅಕ್ಷರಗಳನ್ನು ಕೆತ್ತಿದರು. ಅವರು, “ಯೆಹೋವನಿಗೆ ಪವಿತ್ರವಾದದ್ದು” ಎಂಬ ಮಾತುಗಳನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಶುದ್ಧ ಬಂಗಾರದಿಂದ ಪರಿಶುದ್ಧ ಕಿರೀಟದ ತಗಡನ್ನು ಮಾಡಿ, ಮುದ್ರೆ ಕೆತ್ತುವ ಪ್ರಕಾರ ಅದರಲ್ಲಿ, “ಯೆಹೋವ ದೇವರಿಗೆ ಪರಿಶುದ್ಧ,” ಎಂದು ಕೆತ್ತಿಸಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:30
11 ತಿಳಿವುಗಳ ಹೋಲಿಕೆ  

ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.


ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.


ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ, ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ತೆರೆಯನ್ನು ಮಾಡಿಸಬೇಕು.


ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಅದನ್ನು ಪೇಟಕ್ಕೆ ಬಿಗಿಸುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು