Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:32 - ಕನ್ನಡ ಸತ್ಯವೇದವು C.L. Bible (BSI)

32 ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಅದನ್ನು ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಹೀಗೆ ಪವಿತ್ರಗುಡಾರವಾದ ದೇವದರ್ಶನ ಗುಡಾರದ ಕೆಲಸವೆಲ್ಲವೂ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಪ್ರತಿಯೊಂದನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:32
24 ತಿಳಿವುಗಳ ಹೋಲಿಕೆ  

ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಂತೆಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.


ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.


ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ಅವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ತೆರೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.


ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಬಲಿಪೀಠದ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳೆದುಕೊಳ್ಳುವರು.


ಆಗ ಅವರು ಆ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು; ಡೇರೆಯನ್ನೂ ಅದಕ್ಕೆ ಸಂಬಂಧಪಟ್ಟದ್ದೆಲ್ಲವನ್ನೂ, ಅಂದರೆ ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ;


ಅದನ್ನು ಪೇಟಕ್ಕೆ ಬಿಗಿಸುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.


ದೇವದರ್ಶನದ ಗುಡಾರ, ಆಜ್ಞಾಶಾಸನಗಳಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲ ಉಪಕರಣಗಳು;


ಸರ್ವೇಶ್ವರ ಸ್ವಾಮಿ ಮೋಶೆಗೆ:


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.


ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.


ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಒಟ್ಟು ಸಾಮಾನುಗಳು ಯಾವುವೆಂದರೆ :-


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು