Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:14 - ಕನ್ನಡ ಸತ್ಯವೇದವು C.L. Bible (BSI)

14 ಅವನಿಗೆ, “ಲೇವಿಯನಾದ ಆರೋನನು ನಿನಗೆ ಅಣ್ಣನಲ್ಲವೆ? ಅವನು ಚೆನ್ನಾಗಿ ಮಾತಾಡಬಲ್ಲನೆಂದು ನನಗೆ ಗೊತ್ತಿದೆ. ಇಗೋ, ಅವನೇ ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ನಿನ್ನನ್ನು ಕಂಡು ಆನಂದಿಸಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅವನ ಮೇಲೆ ಕೋಪಗೊಂಡು - ನಿನ್ನ ಅಣ್ಣನಾಗಿರುವ ಲೇವಿಯನಾದ ಆರೋನನಿದ್ದಾನಲ್ಲಾ, ಅವನು ಚೆನ್ನಾಗಿ ಮಾತಾಡಬಲ್ಲವನೆಂದು ನನಗೆ ಗೊತ್ತದೆ; ಅವನೇ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ; ನಿನ್ನನ್ನು ಕಂಡು ಸಂತೋಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನು ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಮೋಶೆಯ ಮೇಲೆ ಬೇಸರಗೊಂಡು, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲನೆಂದು ನನಗೆ ಗೊತ್ತಿದೆ. ಅವನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ಕಂಡು, ತನ್ನ ಹೃದಯದಲ್ಲಿ ಆನಂದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:14
19 ತಿಳಿವುಗಳ ಹೋಲಿಕೆ  

ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.


ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.


ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.


ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”


ಸೊಲೊಮೋನನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರ ಎರಡು ಸಾರಿ ಕಾಣಿಸಿಕೊಂಡು,


ಆಗ ಸರ್ವೇಶ್ವರ ಉಜ್ಜನ ಮೇಲೆ ಕೋಪಗೊಂಡರು. ಅಂಥ ಅಗೌರವಕ್ಕಾಗಿ ಅವನನ್ನು ದಂಡಿಸಿದರು. ಅವನು ಅಲ್ಲೇ ದೇವರ ಮಂಜೂಷದ ಬಳಿ ಸತ್ತುಬಿದ್ದನು.


ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.


ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು.


ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.


ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ;


ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.


ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II


“ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಮಾತ್ರ ಮಾತಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?’ ಎಂದು ಹೇಳತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು