Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:23 - ಕನ್ನಡ ಸತ್ಯವೇದವು C.L. Bible (BSI)

23 ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆಂದು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:23
22 ತಿಳಿವುಗಳ ಹೋಲಿಕೆ  

ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.


ಆಗ, ಸಿಂಹಾಸನಾರೂಢನಾದ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಬೀಸುಕಲ್ಲನ್ನು ಹಿಡಿದು ಕೂತಿರುವ ದಾಸಿಯ ಚೊಚ್ಚಲು ಮಗನವರೆಗೂ ಈಜಿಪ್ಟ್ ದೇಶದಲ್ಲಿ ಚೊಚ್ಚಲು ಮಕ್ಕಳೆಲ್ಲರು ಸಾಯುವರು. ಪಶುಪ್ರಾಣಿಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವುವು.


ಕೊಂದನು ಚೊಚ್ಚಲುಗಳನು ಈಜಿಪ್ಟಿನೊಳು I ಮನುಷ್ಯರೊಳು, ಪಶುಪ್ರಾಣಿಗಳೊಳು II


ಕೊಂದನು ನಾಡಿನ ಜ್ಯೇಷ್ಠರೆಲ್ಲರನು I ಗಂಡಸುತನದಾ ಪ್ರಥಮ ಫಲಗಳನು II


ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II


ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


“ನೀನು ಈಜಿಪ್ಟಿನವರ ಅರಸ ಫರೋಹನ ಬಳಿಗೆ ಹೋಗು. ಅವನಿಗೆ, ‘ಇಸ್ರಯೇಲರು ನಿನ್ನ ದೇಶದಿಂದ ಹೊರಟು ಹೋಗುವುದಕ್ಕೆ ಅಪ್ಪಣೆಕೊಡಬೇಕು’ ಎಂದು ಹೇಳು,” ಎಂದರು.


ತರುವಾಯ ಸರ್ವೇಶ್ವರ ಸ್ವಾಮಿ ಮೋಶೆಗೆ ಇಂತೆಂದರು: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು - ‘ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಹೋಗಲು ಅಪ್ಪಣೆ ಕೊಡು.


ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.


ಅನಂತರ ಸರ್ವೇಶ್ವರ, ಮೋಶೆಗೆ ಹೇಳಿದ್ದೇನೆಂದರೆ: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು: ‘ಹಿಬ್ರಿಯರ ದೇವರಾದ ಸರ್ವೇಶ್ವರನು ತನ್ನನ್ನು ಆರಾಧಿಸಲು ತನ್ನ ಜನರಿಗೆ ನಿಮ್ಮಿಂದ ಹೋಗಲು ಅಪ್ಪಣೆಯಾಗಬೇಕೆಂದು ಹೇಳಿದ್ದರು.


ಬಳಿಕ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಹೋಗಿ ಫರೋಹನ ಮುಂದೆ ನಿಂತುಕೊಂಡು ಹೀಗೆನ್ನಬೇಕು: ‘ಹಿಬ್ರಿಯರ ದೇವರಾದ ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡಬೇಕು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, "ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.


ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.


ಈಜಿಪ್ಟಿನ ಚೊಚ್ಚಲುಗಳನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.


“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ಬಳಿಕ ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ನೆಲದ ಧೂಳನ್ನು ಹೊಡೆ. ಆಗ ಈಜಿಪ್ಟಿನ ದೇಶದಲ್ಲೆಲ್ಲ ನೆಲದ ಧೂಳು ಹೇನುಗಳಾಗುವುದು' ಎಂದು ಹೇಳು.”


ಅವರು ಹಾಗೆಯೆ ಮಾಡಿದರು. ಆರೋನನು ಕೋಲನ್ನು ಹಿಡಿದು ಕೈಚಾಚಿ ಧೂಳನ್ನು ಹೊಡೆದನು. ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿಕೊಂಡವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು.


ನೀನು ಅವರಿಗೆ ಅಪ್ಪಣೆಕೊಡದೆ ಇನ್ನೂ ಅವರನ್ನು ತಡೆದೆಯಾದರೆ,


ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರಮಾಡುವೆನು.


ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಸರ್ವೇಶ್ವರ ಈಜಿಪ್ಟಿನಲ್ಲಿದ್ದ ಚೊಚ್ಚಲು ಮಕ್ಕಳನ್ನು ಹಾಗು ಪಶುಪ್ರಾಣಿಗಳ ಚೊಚ್ಚಲು ಮರಿಗಳನ್ನೂ ಅಂತೂ ಈ ದೇಶದಲ್ಲಿ ಚೊಚ್ಚಲಾಗಿದ್ದುದೆಲ್ಲವನ್ನು ಸಂಹಾರ ಮಾಡಿದರು. ಆದಕಾರಣ ಗಂಡಾದ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಸರ್ವೇಶ್ವರನಿಗೆ ಸಮರ್ಪಿಸುತ್ತೇವೆ. ಮನುಷ್ಯರಿಗೆ ಹುಟ್ಟಿದ ಪ್ರಥಮ ಗರ್ಭಫಲವನ್ನಾದರೋ ಬದಲು ಕೊಟ್ಟು ಬಿಡಿಸಿಕೊಳ್ಳುತ್ತೇವೆ,” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು