Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಅವನಿಗೆ ನಿನ್ನ ಕೈಯನ್ನು ತಿರುಗಿ ಎದೆಯಭಾಗದೊಳಗೆ “ಸೇರಿಸು” ಎಂದು ಹೇಳಿದನು. ಅವನು ಅದನ್ನು ತಿರುಗಿ ಎದೆಯಭಾಗದೊಳಗೆ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ದೇಹದಂತೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಅವನಿಗೆ - ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಸೇರಿಸು ಎಂದು ಹೇಳಿದನು. ಅವನು ಅದನ್ನು ತಿರಿಗಿ ಉಡಿಯಲ್ಲಿ ಸೇರಿಸಿ ತೆಗೆದು ನೋಡಿದಾಗ ಅದು ಉಳಿದ ಮೈಯಂತೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ದೇವರು, “ನಿನ್ನ ಕೈಯನ್ನು ತಿರಿಗಿ ಉಡಿಯಲ್ಲಿ ಹಾಕು” ಅಂದನು. ಅಂತೆಯೇ ಮೋಶೆಯು ತನ್ನ ಕೈಯನ್ನು ಮತ್ತೆ ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದು ಮೊದಲಿನಂತೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಅವನಿಗೆ, “ನಿನ್ನ ಕೈಯನ್ನು ಉಡಿಯಲ್ಲಿ ಹಾಕು,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ, ಉಡಿಯಿಂದ ಹೊರಗೆ ತೆಗೆದಾಗ, ಅದು ಅವನ ಉಳಿದ ಮೈಯಂತೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:7
6 ತಿಳಿವುಗಳ ಹೋಲಿಕೆ  

ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.


ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಠರೋಗದಿಂದ ನರಳುತ್ತಿದ್ದ ಹತ್ತುಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು,


ಆಗ ಸರ್ವೇಶ್ವರ ಅವನಿಗೆ, “ಆ ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಅರ್ಥಮಾಡಿಕೊಳ್ಳದೆ ಹೋದರೂ ಎರಡನೆಯದನ್ನು ಅರ್ಥಮಾಡಿಕೊಂಡು ನಂಬುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು