Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:15 - ಕನ್ನಡ ಸತ್ಯವೇದವು C.L. Bible (BSI)

15 ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ನನಗೋಸ್ಕರ ಯಾಜಕರಾಗುವದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:15
15 ತಿಳಿವುಗಳ ಹೋಲಿಕೆ  

ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”


“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II


ಆಶೀರ್ವದಿಸುವವನು, ಆಶೀರ್ವಾದ ಪಡೆದವನಿಗಿಂತ ದೊಡ್ಡವನು ಎನ್ನುವುದು ನಿರ್ವಿವಾದ.


ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.


ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.


ನೀನು ಇಸ್ರಯೇಲರಿಗೆ, ‘ನೀವು ಮತ್ತು ನಿಮ್ಮ ಸಂತತಿಯವರು ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.


ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕ ಸೇವೆಗೆ ಸೇರಿಸು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತ ನಿಯಮವಾಗಿ ಪ್ರಾಪ್ತಿಸುವುದು.


ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.


ಅನಂತರ ಅವನ ಮಕ್ಕಳನ್ನು ಬರಮಾಡು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.


ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷಿಕ್ತರಾದ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು