Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:18 - ಕನ್ನಡ ಸತ್ಯವೇದವು C.L. Bible (BSI)

18 ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇ ಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೇಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೇಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ, ಅದರ ಕಾಲುಗಳನ್ನು ಬಿಗಿದು, ಅದರ ಚೌಕಟ್ಟುಗಳನ್ನು ಇರಿಸಿ, ಅಗುಳಿಗಳನ್ನು ಹಾಕಿ, ಅದರ ಸ್ತಂಭಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:18
15 ತಿಳಿವುಗಳ ಹೋಲಿಕೆ  

ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು.


“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು.


ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು.


ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು