Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:34 - ಕನ್ನಡ ಸತ್ಯವೇದವು C.L. Bible (BSI)

34 ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:34
28 ತಿಳಿವುಗಳ ಹೋಲಿಕೆ  

ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ಸರ್ವೇಶ್ವರನ ಆ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.


ಅಲ್ಲಿಯೇ ನಾನು ಇಸ್ರಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವುದು.


ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.


ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.


ಮೋಶೆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವೊಂದು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು. ಆಗ ಮೋಶೆಯ ಸಂಗಡ ಸರ್ವೇಶ್ವರ ಮಾತಾಡುತ್ತಿದ್ದರು.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.


ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ನಾನು ಜನರ ಮಧ್ಯೆ ವಾಸಿಸುವುದಕ್ಕೆ ನನಗೊಂದು ಗುಡಾರವನ್ನು ಕಟ್ಟಿಸಬೇಕು.


ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.


ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ.


ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.


ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:


ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು