Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:10 - ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಕೆಲಸದ ಮೇಲ್ವಿಚಾರಕರೂ ಮೇಸ್ತ್ರಿಗಳೂ ಆ ಜನರಿಗೆ, “ನಿಮಗೆ ಹುಲ್ಲು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಬಿಟ್ಟೀಮಾಡಿಸುವ ಅಧಿಕಾರಿಗಳೂ ಮೇಸ್ತ್ರಿಗಳೂ ಆ ಜನರಿಗೆ - ನಿಮಗೆ ಹುಲ್ಲನ್ನು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಈಜಿಪ್ಟಿನ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು ಮತ್ತು ಮೇಸ್ತ್ರಿಗಳು ಇಸ್ರೇಲರ ಬಳಿಗೆ ಬಂದು, “ಫರೋಹನು ಇಟ್ಟಿಗೆಗಳನ್ನು ಮಾಡಲು ನಿಮಗೆ ಹುಲ್ಲು ಕೊಡುವುದಿಲ್ಲವೆಂದು ತೀರ್ಮಾನಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:10
7 ತಿಳಿವುಗಳ ಹೋಲಿಕೆ  

ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಅದೇ ದಿನ, ಕೆಲಸಮಾಡಿಸುವವರನ್ನೂ ಮೇಸ್ತ್ರಿಗಳನ್ನೂ ಕರೆಯಿಸಿ,


ನೀವು ಅವರಿಂದ ಇನ್ನೂ ಕಷ್ಟಕರವಾದ ಕೆಲಸ ಮಾಡಿಸಬೇಕು. ಕೆಲಸ ಹೆಚ್ಚಾದರೆ ಸುಳ್ಳುಪೊಳ್ಳು ಮಾತುಗಳಿಗೆ ಕಿವಿಗೊಡಲು ಆಸ್ಪದಯಿರುವುದಿಲ್ಲ,” ಎಂದು ಆಜ್ಞಾಪಿಸಿದನು.


ನೀವೇ ಹೋಗಿ ಎಲ್ಲಿಂದಾದರು ತಂದುಕೊಳ್ಳಿ. ಆದರೂ ನೀವು ಮಾಡಬೇಕಾದ ಕೆಲಸ ಮಾತ್ರ ಕಿಂಚಿತ್ತೂ ಕಡಿಮೆಯಾಗಕೂಡದು,” ಎಂದು ವಿಧಿಸಿದರು.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು