Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:17 - ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಅವನು, “ನೀವು ಒಳ್ಳೆಯ ಮೈಗಳ್ಳರು! ನಾವು ಹೋಗಿ ಸರ್ವೇಶ್ವರನಿಗೆ ಬಲಿಯರ್ಪಿಸಿಬರಬೇಕು, ಎನ್ನುವುದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಕ್ಕವನು - ನೀವು ಬಹಳ ಮೈಗಳ್ಳರು, ನಾವು ಹೋಗಿ ಯೆಹೋವನಿಗೆ ಯಜ್ಞಮಾಡಿ ಬರಬೇಕನ್ನುವದಕ್ಕೆ ಇದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದ್ದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟುಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:17
6 ತಿಳಿವುಗಳ ಹೋಲಿಕೆ  

ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಇದನ್ನು ಕಂಡ ಶಿಷ್ಯರು ಸಿಟ್ಟಿಗೆದ್ದರು. “ಏಕೆ ಇಷ್ಟೊಂದು ವ್ಯರ್ಥ?


ಆದರೆ ಇಟ್ಟಿಗೆಗಳ ಲೆಕ್ಕವನ್ನು ಎಂದಿನಂತೆ ಒಪ್ಪಿಸಲಿ.ಅದನ್ನು ಕಡಿಮೆ ಮಾಡಕೂಡದು. ಇವರು ಮೈಗಳ್ಳರು. ಆದ್ದರಿಂದಲೇ, ‘ನಾವು ಹೋಗಿ ನಮ್ಮ ದೇವರಿಗೆ ಬಲಿಯರ್ಪಿಸಿ ಬರುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೊಬ್ಬೆಹಾಕುತ್ತಾ ಇದ್ದಾರೆ.


ಅಧಿಕಾರಿಗಳು ಹುಲ್ಲು ಒದಗಿಸದೆ ಇಟ್ಟಿಗೆಗಳನ್ನು ಮಾಡಬೇಕೆನ್ನುತ್ತಾರೆ. ಇದರಿಂದ ದಾಸರಾದ ನಾವು ಏಟು ತಿನ್ನಬೇಕಾಯಿತು. ತಪ್ಪು ತಮ್ಮ ಜನರದೇ,” ಎಂದು ದೂರಿತ್ತರು.


ನಡೆಯಿರಿ ಕೆಲಸಕ್ಕೆ; ನಿಮಗೆ ಹುಲ್ಲು ಕೊಡುವುದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಲೇಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು