Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:6 - ಕನ್ನಡ ಸತ್ಯವೇದವು C.L. Bible (BSI)

6 ಅದೇ ದಿನ, ಕೆಲಸಮಾಡಿಸುವವರನ್ನೂ ಮೇಸ್ತ್ರಿಗಳನ್ನೂ ಕರೆಯಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ದಿನದಲ್ಲಿ ಫರೋಹನು ಬಿಟ್ಟೀಮಾಡಿಸುವವರನ್ನು ಮತ್ತು ಅವರ ಅಧಿಕಾರಿಗಳನ್ನು ಕರೆಯಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ದಿನದಲ್ಲಿ ಫರೋಹನು ಬಿಟ್ಟೀ ಮಾಡಿಸುವ ಅಧಿಕಾರಿಗಳಿಗೂ ಮೇಸ್ತ್ರಿಗಳಿಗೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದೇ ದಿನ ಫರೋಹನು ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳಿಗೆ ಮತ್ತು ಮೇಸ್ತ್ರಿಗಳಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದೇ ದಿನದಲ್ಲಿ ಫರೋಹನು ಬಿಟ್ಟಿಕೆಲಸ ಮಾಡಿಸುವವರಿಗೂ ಅವರ ಮೇಲ್ವಿಚಾರಕರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:6
14 ತಿಳಿವುಗಳ ಹೋಲಿಕೆ  

ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಕಟ್ಟಪ್ಪಣೆ ಆದುದರಿಂದ ಇಸ್ರಯೇಲ್ ಮೇಸ್ತ್ರಿಗಳು ತಾವು ಎಂಥ ಬಿಕ್ಕಟ್ಟಿಗೆ ಸಿಕ್ಕಿಕೊಂಡೆವೆಂದು ಗ್ರಹಿಸಿಕೊಂಡರು.


ಆದುದರಿಂದ ಕೆಲಸದ ಮೇಲ್ವಿಚಾರಕರೂ ಮೇಸ್ತ್ರಿಗಳೂ ಆ ಜನರಿಗೆ, “ನಿಮಗೆ ಹುಲ್ಲು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ.


ಇದಲ್ಲದೆ, ಯುದ್ಧಕ್ಕೆ ಬೇಕಾದ ಸೈನ್ಯವೂ ಉಜ್ಜೀಯನಿಗಿತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ, ಇವರು ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರ, ಅವನ ಪಟ್ಟಿಯನ್ನು ಬರೆದಿದ್ದರು. ಆಯಾ ಗುಂಪುಗಳು ಪಟ್ಟಿಯ ಕ್ರಮಾನುಸಾರ ಯುದ್ಧಕ್ಕೆ ಹೊರಡುತ್ತಿದ್ದವು.


ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.


ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.


ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.


ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


"ಇನ್ನು ಮೇಲೆ ನೀವು ಈ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಕೂಡದು; ಅವರೇ ಹೋಗಿ ಹುಲ್ಲನ್ನು ಹುಡುಕಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು