Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 5:9 - ಕನ್ನಡ ಸತ್ಯವೇದವು C.L. Bible (BSI)

9 ನೀವು ಅವರಿಂದ ಇನ್ನೂ ಕಷ್ಟಕರವಾದ ಕೆಲಸ ಮಾಡಿಸಬೇಕು. ಕೆಲಸ ಹೆಚ್ಚಾದರೆ ಸುಳ್ಳುಪೊಳ್ಳು ಮಾತುಗಳಿಗೆ ಕಿವಿಗೊಡಲು ಆಸ್ಪದಯಿರುವುದಿಲ್ಲ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಅವರಿಂದ ಕಷ್ಟವಾದ ಬಿಟ್ಟೀಕೆಲಸವನ್ನು ಮಾಡಿಸಬೇಕು. ಅವರಿಗೆ ಕಷ್ಟವಾದ ಕೆಲಸವಿದ್ದರೆ ಸುಳ್ಳು ಮಾತುಗಳಿಗೆ ಲಕ್ಷ್ಯ ಕೊಡುವದಕ್ಕೆ ಮಾರ್ಗವಿಲ್ಲ ಎಂದು ಆಜ್ಞೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಜನರಿಗೆ ಇನ್ನೂ ಕಷ್ಟಕರವಾದ ಕೆಲಸವನ್ನು ಕೊಡಿರಿ. ಅವರು ಕಾರ್ಯಮಗ್ನರಾಗಿರುವಂತೆ ನೋಡಿಕೊಳ್ಳಿರಿ. ಆಗ ಅವರಿಗೆ ಮೋಶೆಯ ಸುಳ್ಳುಗಳನ್ನು ಕೇಳುವುದಕ್ಕೆ ಸಮಯವಿರುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಜನರು ಸುಳ್ಳು ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ. ಅವರು ದುಡಿಯಲಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 5:9
8 ತಿಳಿವುಗಳ ಹೋಲಿಕೆ  

ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.


ನಿಮ್ಮ ಗಾಳಿಮಾತುಗಳಿಗೆ ಇತಿಮಿತಿ ಬೇಡವೇನು? ಇಂಥ ಉತ್ತರ ಕೊಡಲು ನಿಮ್ಮನ್ನು ಒತ್ತಾಯಪಡಿಸಿದ್ದೇನು?


ಬರಿ ಬಾಯಿಮಾತೊಂದರಿಂದ ಯುದ್ಧಕ್ಕೆ ಬೇಕಾದ ವಿವೇಕ ಹಾಗು ಶಕ್ತಿ ಉಂಟೆಂದು ಅರಿತುಕೊಂಡಿರುವೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ?


ಆದರೆ ಇಟ್ಟಿಗೆಗಳ ಲೆಕ್ಕವನ್ನು ಎಂದಿನಂತೆ ಒಪ್ಪಿಸಲಿ.ಅದನ್ನು ಕಡಿಮೆ ಮಾಡಕೂಡದು. ಇವರು ಮೈಗಳ್ಳರು. ಆದ್ದರಿಂದಲೇ, ‘ನಾವು ಹೋಗಿ ನಮ್ಮ ದೇವರಿಗೆ ಬಲಿಯರ್ಪಿಸಿ ಬರುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೊಬ್ಬೆಹಾಕುತ್ತಾ ಇದ್ದಾರೆ.


ಆದುದರಿಂದ ಕೆಲಸದ ಮೇಲ್ವಿಚಾರಕರೂ ಮೇಸ್ತ್ರಿಗಳೂ ಆ ಜನರಿಗೆ, “ನಿಮಗೆ ಹುಲ್ಲು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು