Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:11 - ಕನ್ನಡ ಸತ್ಯವೇದವು C.L. Bible (BSI)

11 “ನೀನು ಈಜಿಪ್ಟಿನವರ ಅರಸ ಫರೋಹನ ಬಳಿಗೆ ಹೋಗು. ಅವನಿಗೆ, ‘ಇಸ್ರಯೇಲರು ನಿನ್ನ ದೇಶದಿಂದ ಹೊರಟು ಹೋಗುವುದಕ್ಕೆ ಅಪ್ಪಣೆಕೊಡಬೇಕು’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ನೀನು ಐಗುಪ್ತ್ಯರ ಅರಸನಾದ ಫರೋಹನ ಬಳಿಗೆ ಹೋಗಿ ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಟು ಹೋಗುವಂತೆ ಅವನ ಸಂಗಡ ಮಾತನಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನು ಐಗುಪ್ತ್ಯರ ಅರಸನಾದ ಫರೋಹನ ಸನ್ನಿಧಿಗೆ ಹೋಗಿ ಅವನಿಗೆ - ಇಸ್ರಾಯೇಲ್ಯರು ನಿನ್ನ ದೇಶದಿಂದ ಹೊರಟು ಹೋಗುವಂತೆ ಅಪ್ಪಣೆಕೊಡಬೇಕೆಂದು ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:11
8 ತಿಳಿವುಗಳ ಹೋಲಿಕೆ  

ಆಗ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು. “ನೋಡು, ನಾನು ನಿನ್ನನ್ನು ಫರೋಹನ ಮುಂದೆ ದೇವರ ಪ್ರತಿನಿಧಿಯನ್ನಾಗಿ ನೇಮಿಸಿದ್ದೇನೆ. ನಿನ್ನ ಅಣ್ಣ ಆರೋನನು ನಿನ್ನ ಪರವಾಗಿ ವಾದಿಸುವನು.


“ನಾನು ಸರ್ವೇಶ್ವರ; ನಾನು ನಿನಗೆ ಹೇಳುವುದನ್ನೆಲ್ಲ ನೀನು ಈಜಿಪ್ಟಿನ ಅರಸ ಫರೋಹನ ಸನ್ನಿಧಿಯಲ್ಲಿ ಹೇಳಬೇಕು,” ಎಂದರು.


ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.


ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


ಆಗ ಸರ್ವೇಶ್ವರ ಮೋಶೆಯ ಸಂಗಡ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು