Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:12 - ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಮೋಶೆ ಸರ್ವೇಶ್ವರನ ಸನ್ನಿಧಿಯಲ್ಲಿ, “ಆಲಿಸಬೇಕು, ಇಸ್ರಯೇಲರೇ ನನ್ನ ಮಾತನ್ನು ಕೇಳಲಿಲ್ಲ; ಇನ್ನು ಫರೋಹನು ಕಿವಿಗೊಟ್ಟಾನೆ? ನನಗಾದರೂ ಚುರುಕಾದ ನಾಲಿಗೆಯಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ - ಇಗೋ, ಇಸ್ರಾಯೇಲ್ಯರೇ ನನ್ನ ಮಾತನ್ನು ಕೇಳಲಿಲ್ಲ. ಫರೋಹನು ಕಿವಿಗೊಟ್ಟಾನೇ? ನಾನು ಮಾತಾಡುವದರಲ್ಲಿ ಜಾಣನಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:12
16 ತಿಳಿವುಗಳ ಹೋಲಿಕೆ  

ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.


ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.


ಅದಕ್ಕೆ ಮೋಶೆ, “ಸ್ವಾಮೀ, ನಾನು ಮಾತಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,


ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು.


ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು.


ಏಕೆಂದರೆ ಈ ಎಲ್ಲ ಜನಾಂಗದವರು, ಇಸ್ರಯೇಲ್ ವಂಶದವರು ಕೂಡ, ಹೃದಯದಲ್ಲಿ ಸುನ್ನತಿಯಿಲ್ಲದವರು. ಇದು ಸರ್ವೇಶ್ವರನಾದ ನಾನು ಆಡುವ ಮಾತು.”


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.


ಆಗ ಮೋಶೆ ಉತ್ತರ ನೀಡಿ,” ಆಲಿಸಬೇಕು; ಆ ಜನರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋಗಬಹುದು: ‘ಸರ್ವೇಶ್ವರ ಸ್ವಾಮಿ ನಿನಗೆ ಕಾಣಿಸಿಕೊಂಡಿದ್ದೇ ಇಲ್ಲ’ ಎಂದು ಹೇಳಬಹುದು” ಎಂದನು.


ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಯೇಲರ ಬಳಿಗೂ ಅರಸ ಫರೋಹನ ಬಳಿಗೂ ಕಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು