Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಯೇಲರ ಬಳಿಗೂ ಅರಸ ಫರೋಹನ ಬಳಿಗೂ ಕಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಾಯೇಲ್ಯರ ಬಳಿಗೂ ಐಗುಪ್ತದ ಅರಸನಾದ ಫರೋಹನ ಬಳಿಗೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:13
14 ತಿಳಿವುಗಳ ಹೋಲಿಕೆ  

ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು.


ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II


ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.


ಅವನ ಮೇಲೆ ಹಸ್ತನಿಕ್ಷೇಪ ಮಾಡಿ ಅವನಿಗೆ ಅಧಿಕಾರವನ್ನು ವಹಿಸಿಕೊಟ್ಟನು.


ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.


ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮುಂದೆ ಹಾಗು ಸಮಾಜದವರೆಲ್ಲರ ಮುಂದೆ ನಿಲ್ಲಿಸು; ಅವನ ಮೇಲೆ ಹಸ್ತನಿಕ್ಷೇಪಮಾಡಿ ಅವರ ಸಮ್ಮುಖದಲ್ಲೆ ಅಧಿಕಾರ ವಹಿಸಿಕೊಡು.


ಅದಕ್ಕೆ ಮೋಶೆ ಸರ್ವೇಶ್ವರನ ಸನ್ನಿಧಿಯಲ್ಲಿ, “ಆಲಿಸಬೇಕು, ಇಸ್ರಯೇಲರೇ ನನ್ನ ಮಾತನ್ನು ಕೇಳಲಿಲ್ಲ; ಇನ್ನು ಫರೋಹನು ಕಿವಿಗೊಟ್ಟಾನೆ? ನನಗಾದರೂ ಚುರುಕಾದ ನಾಲಿಗೆಯಿಲ್ಲ,” ಎಂದನು.


ಅವರ ಗೋತ್ರಗಳ ಮೂಲಪುರುಷರು ಇವರು: ಇಸ್ರಯೇಲನ ಜ್ಯೇಷ್ಠ ಪುತ್ರನಾದ ರೂಬೇನನಿಗೆ ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದ ಉಂಟಾದ ಗೋತ್ರಗಳಿಗೆ ಮೂಲ ಪುರುಷರು.


“ತಮ್ಮ ತಮ್ಮ ಗೋತ್ರದ ಪ್ರಕಾರ ಇಸ್ರಯೇಲ್ ಜನರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬರುವುದಕ್ಕೆ ಸರ್ವೇಶ್ವರನಿಂದ ಆಜ್ಞೆಹೊಂದಿದ ಆರೋನ್ ಮತ್ತು ಮೋಶೆ ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು