Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:6 - ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:6
46 ತಿಳಿವುಗಳ ಹೋಲಿಕೆ  

ಭುಜಬಲ, ಶಿಕ್ಷಾಹಸ್ತ, ಮಹಾಭೀತಿ, ಮಹತ್ಕಾರ್ಯ, ಸೂಚಕಕಾರ್ಯ, ಇವುಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದರು.


ತಮ್ಮ ಇಸ್ರಯೇಲ್ ಪ್ರಜೆಗೆ ಸಮನಾದ ಜನಾಂಗ ಲೋಕದಲ್ಲಿ ಬೇರೆ ಯಾವುದಿದೆ? ದೇವರಾದ ತಾವೇ ಬಂದು ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿಸಿಕೊಂಡಿರಿ; ಆಶ್ಚರ್ಯಕರವಾದ ಅದ್ಭುತಕಾರ್ಯಗಳಿಂದ ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರ ಕೈಯಿಂದ ತಮ್ಮ ಪ್ರಜೆಯನ್ನು ತಪ್ಪಿಸಿ, ರಕ್ಷಿಸಿದಿರಿ. ಅನ್ಯಜನಾಂಗಗಳನ್ನು ಅವರ ನಾಡಿನಿಂದ ಹೊರಡಿಸಿಬಿಟ್ಟಿರಿ.


ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?


ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು : I “ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು I ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು II


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ನಿಮ್ಮನ್ನು ಮಹಾಶಕ್ತಿ ಹಾಗು ಭುಜಪರಾಕ್ರಮಗಳ ಮೂಲಕ ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ಸರ್ವೇಶ್ವರನಾದ ನನ್ನಲ್ಲೇ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈಮುಗಿದು ಬಲಿಯರ್ಪಿಸಬೇಕು.


“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.


ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


“ನಾನು ಸರ್ವೇಶ್ವರ; ನಾನು ನಿನಗೆ ಹೇಳುವುದನ್ನೆಲ್ಲ ನೀನು ಈಜಿಪ್ಟಿನ ಅರಸ ಫರೋಹನ ಸನ್ನಿಧಿಯಲ್ಲಿ ಹೇಳಬೇಕು,” ಎಂದರು.


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ದೇವರು ಮೋಶೆಯ ಸಂಗಡ ಮಾತಾಡಿ ಇಂತೆಂದರು:


ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಮೋಶೆ ಮತ್ತು ಆರೋನರು ಇಸ್ರಯೇಲರೆಲ್ಲರನ್ನು ಉದ್ದೇಶಿಸಿ, “ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವರು ಸರ್ವೇಶ್ವರ ಸ್ವಾಮಿಯೇ ಎಂಬುದು ಈ ಸಂಜೆ ನಿಮಗೆ ಗೊತ್ತಾಗುವುದು.


ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.


ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.


ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.


ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.


ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.


ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀವು ಬಿಡಿಸಿದ ನಿಮ್ಮ ಸ್ವಕೀಯ ಜನ ಹಾಗು ಸೊತ್ತು ಇವರಲ್ಲವೇ? ಎಂದು ಬಿನ್ನೈಸಿದೆ.


“ನಿಮ್ಮ ದೇವರಾದ ಸರ್ವೇಶ್ವರ ಪ್ರಯೋಗಿಸಿದ ಶಿಕ್ಷಣಕ್ರಮವನ್ನೂ ಮಹಿಮೆಯನ್ನೂ ಭುಜಬಲವನ್ನೂ ಶಿಕ್ಷಾಹಸ್ತವನ್ನೂ


ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದವನಾದ ಒಬ್ಬ ಪರದೇಶೀಯನು ನಿಮ್ಮ ನಾಮಸ್ತುತಿಗಾಗಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ,


ಜಲರಾಶಿಗಳು ದೇವಾ, ನಿನ್ನ ಕಂಡವು I ಕಾಣುತ್ತಲೇ ನಡುಗಿ ತಳಮಳಗೊಂಡವು I ತಳದವರೆಗೂ ಅಲ್ಲಕಲ್ಲೋಲವಾದವು II


“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


“ಆದರೆ ಕೇಳಲಿಲ್ಲಾ ಜನತೆ ನನ್ನ ಮಾತುಗಳನು I ತೋರಲಿಲ್ಲ ಇಸ್ರಯೇಲರು ನನಗೆ ವಿಧೇಯತೆಯನು, II


ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ, ನಿಮ್ಮ ಮೇಲೆ ದೊರೆತನಮಾಡುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು