Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:20 - ಕನ್ನಡ ಸತ್ಯವೇದವು C.L. Bible (BSI)

20 ಮೋಶೆ ಮತ್ತು ಆರೋನರು ಸರ್ವೇಶ್ವರ ಸ್ವಾಮಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಫರೋಹನ ಹಾಗು ಅವನ ಪರಿವಾರದ ಮುಂದೆ ಆರೋನನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆದನು. ಅದೆಲ್ಲ ರಕ್ತಮಯ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೋಶೆ ಮತ್ತು ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೋಶೆ ಆರೋನರು ಯೆಹೋವನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ಫರೋಹನ ಮತ್ತು ಅವನ ಪರಿವಾರದ ಮುಂದೆ ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆಯಲು ಅದೆಲ್ಲಾ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಆರೋನರು ಮಾಡಿದರು. ಆರೋನನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ಕೋಲನ್ನು ಎತ್ತಿ ನೈಲ್ ನದಿಯ ನೀರನ್ನು ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಫರೋಹನ ಮುಂದೆಯೂ, ಅವನ ಸೇವಕರ ಮುಂದೆಯೂ ಹೊಡೆದನು. ಆಗ ನದಿಯಲ್ಲಿದ್ದ ನೀರೆಲ್ಲಾ ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:20
14 ತಿಳಿವುಗಳ ಹೋಲಿಕೆ  

ರಕ್ತವಾಗಿಸಿದನಾತ ಅವರ ನದಿಗಳನು I ಸಾಯಿಸಿದನು ಅವುಗಳಲಿದ್ದ ಮೀನುಗಳನು II


ಅಲ್ಲಿ ಆತ ರಕ್ತವಾಗಿಸಿದನು ನದಿನೀರನು I ಕುಡಿಯಲಾಗದಂತೆ ಮಾಡಿದನಾ ತೊರೆನೀರನು II


ಎರಡನೆಯ ದೇವದೂತನು ತುತೂರಿಯನ್ನು ಊದಿದನು. ಬೆಂಕಿ ಹತ್ತಿ ಉರಿಯುತ್ತಿರುವ ಪರ್ವತವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರಕ್ಕೆ ಎಸೆಯಲಾಯಿತು. ಸಮುದ್ರದಲ್ಲಿ ಮೂರನೆಯ ಒಂದು ಭಾಗ ರಕ್ತವಾಗಿ ಮಾರ್ಪಟ್ಟಿತು.


ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು.


ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿ ಹೊಲಸಾಗಿ ನಾರುತ್ತಿತ್ತು. ಈಜಿಪ್ಟಿನವರು ಅದರ ನೀರನ್ನು ಕುಡಿಯಲಾರದೆ ಹೋದರು. ಈಜಿಪ್ಟ್ ದೇಶವೆಲ್ಲಾ ರಕ್ತಮಯ ಆಯಿತು.


ಆಗ ಎಲೀಷನು ಗೇಹಜಿಗೆ, “ನೀನು ಹೋಗಿ, ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ, ಆ ಹುಡುಗನ ಮುಖದ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಯಾವ ವಂದನೆಯನ್ನೂ ಸ್ವೀಕರಿಸಬೇಡ," ಎಂದು ಹೇಳಿ ಕಳುಹಿಸಿದನು.


ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?


ಸರ್ವೇಶ್ವರ ಸ್ವಾಮಿಯ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋದರು. ಸರ್ವೇಶ್ವರ ತಮಗೆ ಹೇಳಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಬಿಸಾಡಿದಾಗ ಅದು ಸರ್ಪ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು