Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:23 - ಕನ್ನಡ ಸತ್ಯವೇದವು C.L. Bible (BSI)

23 ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಫರೋಹನು ಆ ಮಹತ್ಕಾರ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಫರೋಹನು ಆ ಮಹತ್ಕಾರ್ಯವನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ತನ್ನ ಮನೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಫರೋಹನು ತನ್ನ ಮನೆಗೆ ಹೊರಟುಹೋದನು. ಮೋಶೆ ಆರೋನರು ಮಾಡಿದ ಮಹತ್ಕಾರ್ಯಗಳನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಫರೋಹನು ತಿರುಗಿಕೊಂಡು ತನ್ನ ಅರಮನೆಗೆ ಹಿಂದಿರುಗಿದನು. ಅವನು ಈ ಅದ್ಭುತಕ್ಕೂ ಗಮನಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:23
20 ತಿಳಿವುಗಳ ಹೋಲಿಕೆ  

ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.


ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಅದನ್ನು ನೋಡಿ ಚಿಂತಿಸತೊಡಗಿದೆ; ಆ ದೃಶ್ಯದಿಂದ ಈ ಪಾಠ ಕಲಿತೆ:


ಜ್ಞಾನಿಗಳ ನುಡಿಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ಮನಸ್ಸಿನಲ್ಲಿಡು.


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?


ಆಕೆ ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಮಹಿಳೆಯರು, “ಭಯಪಡಬೇಡ, ಮಗನನ್ನು ಹೆತ್ತಿದ್ದೀ,” ಎಂದು ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ. ಪ್ರತ್ಯುತ್ತರವನ್ನೂ ಕೊಡಲಿಲ್ಲ.


“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಮಿಕ್ಕವರು ಆ ಮಾತನ್ನು ಗಮನಕ್ಕೆ ತಂದುಕೊಳ್ಳದೆ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಹೊಲಗದ್ದೆಗಳಲ್ಲೇ ಬಿಟ್ಟರು.


ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು.


ಈಜಿಪ್ಟಿನವರೆಲ್ಲರು ಆ ನದಿಯ ನೀರನ್ನು ಕುಡಿಯಲಾಗದೆ, ಕುಡಿಯುವ ನೀರಿಗಾಗಿ ಅದರ ಸುತ್ತಲು ಅಗೆದರು.


ಫರೋಹನ ಸೇವಕರಲ್ಲಿ ಕೆಲವರು ಸರ್ವೇಶ್ವರನ ಈ ಮಾತಿಗೆ ಹೆದರಿ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಬೇಗನೆ ಮನೆಗೆ ಬರಮಾಡಿಕೊಂಡರು.


ಭಯದಿಂದ ನಡೆದುಕೊಳ್ಳುವವನು ಭಾಗ್ಯವಂತನು; ಕಠಿಣ ಹೃದಯನು ಕೇಡಿಗೆ ತುತ್ತಾಗುವನು.


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು