Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:17 - ಕನ್ನಡ ಸತ್ಯವೇದವು C.L. Bible (BSI)

17 ಅವರು ಹಾಗೆಯೆ ಮಾಡಿದರು. ಆರೋನನು ಕೋಲನ್ನು ಹಿಡಿದು ಕೈಚಾಚಿ ಧೂಳನ್ನು ಹೊಡೆದನು. ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿಕೊಂಡವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಹಾಗೆಯೇ ಮಾಡಿದರು; ಆರೋನನು ಕೋಲನ್ನು ಹಿಡುಕೊಂಡು ಕೈಚಾಚಿ ಭೂವಿುಯ ಧೂಳನ್ನು ಹೊಡೆಯಲು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹೇನುಗಳು ಬಂದವು; ಐಗುಪ್ತ ದೇಶದಲ್ಲೆಲ್ಲಾ ಭೂವಿುಯಲ್ಲಿರುವ ಧೂಳು ಹೇನುಗಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವರು ಹಾಗೆಯೇ ಮಾಡಿದರು. ಆರೋನನು ತನ್ನ ಕೈಯಲ್ಲಿದ್ದ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆದನು. ಆಗ ಈಜಿಪ್ಟಿನ ಪ್ರತಿಯೊಂದು ಸ್ಥಳದ ಧೂಳು ಹೇನುಗಳಾಗಿ ಪ್ರಾಣಿಗಳ ಮೇಲೂ ಜನರ ಮೇಲೂ ಏರಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ಹಾಗೆಯೇ ಮಾಡಲಾರಂಭಿಸಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು, ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾದವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:17
7 ತಿಳಿವುಗಳ ಹೋಲಿಕೆ  

ಕಾಣಿಸಿಕೊಂಡವು ಆತನಾಜ್ಞಾಪಿಸಲು I ಹುಳುಹುಪ್ಪಟೆಗಳು ಪ್ರಾಂತ್ಯದೆಲ್ಲೆಡೆಯೊಳು II


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಬಳಿಕ ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ನೆಲದ ಧೂಳನ್ನು ಹೊಡೆ. ಆಗ ಈಜಿಪ್ಟಿನ ದೇಶದಲ್ಲೆಲ್ಲ ನೆಲದ ಧೂಳು ಹೇನುಗಳಾಗುವುದು' ಎಂದು ಹೇಳು.”


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


ಕಳುಹಿಸಿದನು ವಿನಾಶಕರ ಹುಳುಗಳನು I ಹಾಳುಮಾಡುವ ವಿಷಮಂಡೂಕಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು