Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:20 - ಕನ್ನಡ ಸತ್ಯವೇದವು C.L. Bible (BSI)

20 ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ಯೆಹೋವನು ಮೋಶೆಗೆ - ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ; ಅವನು ನದಿಗೆ ಹೋಗುತ್ತಾನಲ್ಲಾ. ನೀನು ಅವನಿಗೆ ಹೀಗನ್ನಬೇಕು - ಯೆಹೋವನು ಆಜ್ಞಾಪಿಸುವದೇನಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, ‘ಯೆಹೋವನು ಹೀಗೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:20
11 ತಿಳಿವುಗಳ ಹೋಲಿಕೆ  

ಬೆಳಿಗ್ಗೆ ನೀನು ಫರೋಹನ ಬಳಿಗೆ ಹೋಗು. ಆಗ ಅವನು ನದಿಗೆ ಹೋಗುತ್ತಿರುತ್ತಾನೆ. ಅವನನ್ನು ಭೇಟಿಯಾಗಲು ನೈಲ್ ನದಿ ತೀರದಲ್ಲೆ ನಿಂತುಕೊಂಡಿರು. ಸರ್ಪವಾಗಿ ಮಾರ್ಪಟ್ಟ ಆ ಕೋಲು ನಿನ್ನ ಕೈಯಲ್ಲಿರಲಿ.


ಬಳಿಕ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಹೋಗಿ ಫರೋಹನ ಮುಂದೆ ನಿಂತುಕೊಂಡು ಹೀಗೆನ್ನಬೇಕು: ‘ಹಿಬ್ರಿಯರ ದೇವರಾದ ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡಬೇಕು.


ತರುವಾಯ ಸರ್ವೇಶ್ವರ ಸ್ವಾಮಿ ಮೋಶೆಗೆ ಇಂತೆಂದರು: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು - ‘ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಹೋಗಲು ಅಪ್ಪಣೆ ಕೊಡು.


“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ಅಷ್ಟರಲ್ಲಿ ಫರೋಹನ ಪುತ್ರಿ ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು. ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ನಡುವೆ ಪೆಟ್ಟಿಗೆಯೊಂದನ್ನು ಕಂಡಳು. ದಾಸಿಯೊಬ್ಬಳನ್ನು ಕಳಿಸಿ ಅದನ್ನು ತರಿಸಿದಳು.


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು.


ಕೊಡದೆ ಹೋದರೆ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ನಿನ್ನ ಮನೆಮಾರುಗಳಿಗೂ ನೊಣಗಳ ಕಾಟವನ್ನು ಉಂಟುಮಾಡುವೆನು. ಈಜಿಪ್ಟಿನವರು ವಾಸಿಸುವ ಮನೆಗಳಲ್ಲೂ ಅವರು ಕಾಲೂರುವ ನೆಲಗಳಲ್ಲೂ ಆ ನೊಣಗಳು ತುಂಬಿಕೊಳ್ಳುವುವು.


ಕಳುಹಿಸಿದನು ವಿನಾಶಕರ ಹುಳುಗಳನು I ಹಾಳುಮಾಡುವ ವಿಷಮಂಡೂಕಗಳನು II


ಕಾಣಿಸಿಕೊಂಡವು ಆತನಾಜ್ಞಾಪಿಸಲು I ಹುಳುಹುಪ್ಪಟೆಗಳು ಪ್ರಾಂತ್ಯದೆಲ್ಲೆಡೆಯೊಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು