Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:26 - ಕನ್ನಡ ಸತ್ಯವೇದವು C.L. Bible (BSI)

26 ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಬಲಿಯಾಗಿ ಕೊಡುವ ಆಹುತಿ ಈಜಿಪ್ಟಿನವರಿಗೆ ನಿಷಿದ್ಧವಾದದ್ದು. ನಿಷಿದ್ಧವೆಂದು ಈಜಿಪ್ಟಿನವರು ತಿಳಿದುಕೊಂಡು ಇರುವ ಆಹುತಿಯನ್ನು ನಾವು ಅವರ ಕಣ್ಮುಂದೆಯೇ ಮಾಡಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಮೋಶೆ - ಹಾಗೆ ಮಾಡುವದು ಯುಕ್ತವಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞದಲ್ಲಿ ಕೊಡುವ ಆಹುತಿ ಐಗುಪ್ತ್ಯರಿಗೆ ನಿಷೇಧ. ನಿಷಿದ್ಧವೆಂದು ಐಗುಪ್ತ್ಯರು ತಿಳುಕೊಂಡಿರುವ ಆಹುತಿಯನ್ನು ನಾವು ಅವರ ಕಣ್ಣಿನ ಮುಂದೆ ಮಾಡಿದರೆ ಅವರು ನಮ್ಮನ್ನು ಕೊಲ್ಲುವದಕ್ಕೆ ಕಲ್ಲೆಸೆಯುವರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅದಕ್ಕೆ ಮೋಶೆ, “ಅದು ಸರಿಯಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಅರ್ಪಿಸುವ ಯಜ್ಞಗಳು ಈಜಿಪ್ಟಿನವರಿಗೆ ನಿಷಿದ್ಧವಾಗಿವೆ. ಹೀಗಿರಲು ಅವರ ಕಣ್ಣೆದುರಿಗೇ ಅಂಥ ಯಜ್ಞಗಳನ್ನು ಅರ್ಪಿಸಿದರೆ, ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಮೋಶೆಯು ಫರೋಹನಿಗೆ, “ಹಾಗೆ ಮಾಡುವುದು ಯುಕ್ತವಲ್ಲ. ಏಕೆಂದರೆ ನಮ್ಮ ಯೆಹೋವ ದೇವರಾದ ದೇವರಿಗೆ ಯಜ್ಞವನ್ನರ್ಪಿಸುವುದು ಈಜಿಪ್ಟಿನವರಿಗೆ ಅಸಹ್ಯವಾಗಿರುವುದು. ಈಜಿಪ್ಟಿನವರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಅರ್ಪಿಸಿದರೆ, ಅವರು ನಮ್ಮ ಮೇಲೆ ಕಲ್ಲೆಸೆದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:26
11 ತಿಳಿವುಗಳ ಹೋಲಿಕೆ  

'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ಪರಿಚಾರಕರು ಅವನಿಗೆ ಬೇರೆ, ಅವನ ಅಣ್ಣತಮ್ಮಂದಿರಿಗೇ ಬೇರೆ, ಅವನ ಸಂಗಡವಿದ್ದ ಈಜಿಪ್ಟಿನವರಿಗೇ ಬೇರೆ, ಹೀಗೆ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಈಜಿಪ್ಟಿನವರು ಹಿಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವುದಿಲ್ಲ; ಅದು ಅವರಿಗೆ ಅಸಹ್ಯ.


“ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,


ಇಸ್ರಯೇಲರ ಅರಸ ಸೊಲೊಮೋನನು ಸಿದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಜೆರುಸಲೇಮಿನ ಎದುರಿನಲ್ಲೂ ಎಘ್ನಪರ್ವತದ ದಕ್ಷಿಣದಿಕ್ಕಿನಲ್ಲೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು