Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:29 - ಕನ್ನಡ ಸತ್ಯವೇದವು C.L. Bible (BSI)

29 ಆಗ ಮೋಶೆ, “ನಿಮ್ಮ ಬಳಿಯಿಂದ ಹೊರಟಾಗಲೆ ಫರೋಹನಾದ ನಿಮಗೂ ನಿಮ್ಮ ಪ್ರಜಾಪರಿವಾರದವರಿಗೂ ನೊಣಗಳ ಕಾಟ ನಾಳೆಯಿಂದ ಇರಬಾರದೆಂದು ಸರ್ವೇಶ್ವರನಿಗೆ ಪ್ರಾರ್ಥನೆ ಮಾಡುತ್ತೇನೆ. ಆದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನೀವು ಜನರಿಗೆ ಅಪ್ಪಣೆಕೊಡದೆ ವಂಚನೆ ಮಾಡಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಮೋಶೆಯು, “ನಾನು ನಿನ್ನ ಬಳಿಯಿಂದ ಹೊರಟು ಹೋದ ಕೂಡಲೇ, ಫರೋಹನಾದ ನಿನಗೂ, ನಿನ್ನ ಪರಿವಾರದವರಿಗೂ ನೊಣಗಳ ಬಾಧೆಯು ನಾಳೆಯಿಂದ ಇರಬಾರದೆಂಬುದಾಗಿ ನಾನು ಯೆಹೋವನನ್ನು ಬೇಡಿಕೊಳ್ಳುವೆನು. ಆದರೆ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ನೀನು ನನ್ನ ಜನರಿಗೆ ಅಪ್ಪಣೆಕೊಡದೆ ಇನ್ನು ಮುಂದೆ ವಂಚನೆಮಾಡಬಾರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಮೋಶೆ - ನಾನು ನಿನ್ನ ಬಳಿಯಿಂದ ಹೊರಟಾಗ ಫರೋಹನಾದ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ಹುಳಗಳ ಬಾಧೆಯು ನಾಳೆಯಿಂದ ಇರಬಾರದೆಂಬದಾಗಿ ಯೆಹೋವನಿಗೆ ಪ್ರಾರ್ಥನೆ ಮಾಡುವೆನು. ಆದರೆ ಯೆಹೋವನಿಗೆ ಯಜ್ಞಮಾಡಲಿಕ್ಕೆ ನೀನು ಜನರಿಗೆ ಅಪ್ಪಣೆ ಕೊಡದೆ ಇನ್ನು ಮುಂದೆ ವಂಚನೆಮಾಡಬಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅದಕ್ಕೆ ಮೋಶೆ, “ನಾನು ಇಲ್ಲಿಂದ ಹೋದಾಗ, ನಿನಗೂ ನಿನ್ನ ಪ್ರಜೆಗಳಿಗೂ ನಿನ್ನ ಅಧಿಕಾರಿಗಳಿಗೂ ಹುಳಗಳ ಬಾಧೆ ನಾಳೆಯಿಂದ ಇರಬಾರದೆಂಬುದಾಗಿ ಯೆಹೋವನಿಗೆ ಪ್ರಾರ್ಥಿಸುವೆನು. ಆದರೆ ಮತ್ತೆ ನೀನು ವಂಚಿಸಿ ಜನರು ಯಜ್ಞಗಳನ್ನು ಸಮರ್ಪಿಸದಂತೆ ತಡೆಯಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಮೋಶೆಯು ಅವನಿಗೆ, “ನಾನು ನಿನ್ನನ್ನು ಬಿಟ್ಟು ಹೋಗಿ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ, ಅವನ ಸೇವಕರನ್ನೂ, ಅವರ ಜನರನ್ನೂ ಬಿಟ್ಟು ಹೋಗುವುವು. ಆದರೆ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುವುದಕ್ಕೆ ಫರೋಹನಾದ ನೀನು ಜನರನ್ನು ಕಳುಹಿಸದೆ ಇನ್ನು ಮೇಲೆ ವಂಚಿಸಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:29
9 ತಿಳಿವುಗಳ ಹೋಲಿಕೆ  

ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಆದರೂ ತಾವಾಗಲಿ ತಮ್ಮ ಪರಿವಾರದವರಾಗಲಿ ದೇವರಾದ ಸರ್ವೇಶ್ವರನಿಗೆ ಭಯಪಡುವುದಿಲ್ಲವೆಂದು ಬಲ್ಲೆನು,” ಎಂದನು.


ಇದನ್ನು ಕೇಳಿ ಪ್ರವಾದಿ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದ್ದೇನೆ. ಇಗೋ, ನಿಮ್ಮ ಕೋರಿಕೆಯ ಪ್ರಕಾರ ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸುವೆನು. ಸರ್ವೇಶ್ವರ ಯಾವ ಉತ್ತರವನ್ನು ದಯಪಾಲಿಸುವರೋ ಅದರಲ್ಲಿ ಒಂದನ್ನೂ ಮುಚ್ಚುಮರೆಮಾಡದೆ ನಿಮಗೆ ತಿಳಿಸುವೆನು.” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು