Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:3 - ಕನ್ನಡ ಸತ್ಯವೇದವು C.L. Bible (BSI)

3 ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ಹೊರಟುಬಂದು ನಿನ್ನ ಅರಮನೆಯಲ್ಲೂ ಮಲಗುವ ಕೋಣೆಯಲ್ಲೂ ನಿನ್ನ ಹಾಸಿಗೆಯಲ್ಲೂ ನಿನ್ನ ಪರಿವಾರದವರ ಹಾಗು ಪ್ರಜೆಗಳ ಮನೆಗಳಲ್ಲೂ ಒಲೆಗಳಲ್ಲೂ ಹಿಟ್ಟುನಾದುವ ಹರಿವಾಣಗಳಲ್ಲೂ ಕಾಣಿಸಿಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯಾತವಾಗಿ ಹುಟ್ಟುವವು. ಅವು ಹೊರಟು ಬಂದು ನಿನ್ನ ಅರಮನೆಯಲ್ಲಿಯೂ, ಮಲಗುವ ಕೋಣೆಯಲ್ಲಿಯೂ, ಮಂಚದ ಮೇಲೆಯೂ ಬರುವುದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ, ನಿನ್ನ ಪ್ರಜೆಗಳ ಮೇಲೆಯೂ, ಒಲೆಗಳಲ್ಲಿಯೂ, ಹಿಟ್ಟು ನಾದುವ ಪಾತ್ರೆಗಳಲ್ಲಿಯೂ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೈಲ್ ನದಿಯಲ್ಲಿ ಕಪ್ಪೆಗಳು ಅಸಂಖ್ಯವಾಗಿ ಹುಟ್ಟುವವು; ಅವು ಹೊರಟುಬಂದು ನಿನ್ನ ಅರಮನೆಯಲ್ಲಿಯೂ ಮಲಗುವ ಕೋಣೆಯಲ್ಲಿಯೂ ಮಂಚದ ಮೇಲೆಯೂ ಬರುವದಲ್ಲದೆ ನಿನ್ನ ಪರಿವಾರದವರ ಮನೆಗಳಲ್ಲಿಯೂ ನಿನ್ನ ಪ್ರಜೆಗಳ ಮೇಲೆಯೂ ಒಲೆಗಳಲ್ಲಿಯೂ ಹಿಟ್ಟುನಾದುವ ಕೊಣವಿಗೆಗಳಲ್ಲಿಯೂ ಬರುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೈಲ್ ನದಿಯು ಕಪ್ಪೆಗಳಿಂದ ತುಂಬಿ ಹೋಗುವುದು. ಕಪ್ಪೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಹಿಟ್ಟುನಾದುವ ತಟ್ಟೆಗಳಲ್ಲಿಯೂ ಇರುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ನಿನ್ನ ಅರಮನೆಯಲ್ಲಿಯೂ ನೀನು ಮಲಗುವ ಕೊಠಡಿಯಲ್ಲಿಯೂ ನಿನ್ನ ಹಾಸಿಗೆಯ ಮೇಲೂ ನಿನ್ನ ಸೇವಕರ ಮನೆಗಳಲ್ಲಿಯೂ ನಿನ್ನ ಜನರ ಮೇಲೆಯೂ ನಿನ್ನ ಒಲೆಗಳಲ್ಲಿಯೂ ನಿನ್ನ ಹಿಟ್ಟು ನಾದುವ ಹರಿವಾಣಗಳಲ್ಲಿಯೂ ಕಾಣಿಸಿಕೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:3
8 ತಿಳಿವುಗಳ ಹೋಲಿಕೆ  

ತುಂಬಿಕೊಂಡವು ಕಪ್ಪೆಗಳು ನಾಡಿನೊಳೆಲ್ಲ I ಹರಡಿಕೊಂಡವು ಅರಸನ ಕೊಠಡಿಗಳಲೆಲ್ಲ II


ಆದುದರಿಂದ ಇಸ್ರಯೇಲರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮುಂಚೆಯೇ ನಾದುವ ಹರಿವಾಣಗಳಲ್ಲಿದ್ದ ಕಣಕದ ಮುದ್ದೆಯನ್ನು ಹಾಗೆಯೇ ಗಂಟುಕಟ್ಟಿ ತಮ್ಮ ಹೆಗಲಿನ ಮೇಲೆ ಹಾಕಿಕೊಂಡು ಹೊರಟೇಬಿಟ್ಟರು.


ಕೊಡದೆ ಹೋದರೆ ನಿನ್ನ ದೇಶಕ್ಕೆಲ್ಲಾ ಕಪ್ಪೆಗಳ ಕಾಟ ತಗಲುವಂತೆ ಮಾಡುವೆನು.


ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”


ನಿನ್ನ ಮನೆಗಳಲ್ಲೂ ನಿನ್ನ ಪರಿವಾರದವರ ಮನೆಗಳಲ್ಲೂ ಈಜಿಪ್ಟಿನವರ ಮನೆಗಳಲ್ಲೂ ಅವು ತುಂಬಿಕೊಳ್ಳುವುವು. ನಿಮ್ಮ ತಂದೆ ತಾತಂದಿರ ಕಾಲದಿಂದ ಇಂದಿನವರೆಗೂ ಅಂಥ ಮಿಡಿತೆದಂಡನ್ನು ಯಾರೂ ನೋಡಿಲ್ಲ.” ಹೀಗೆಂದು ಹೇಳಿ ಮೋಶೆ ಫರೋಹನ ಬಳಿಯಿಂದ ಹೊರಟುಹೋದನು.


ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆ, ಹತರಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ ಅಹಜ್ಯನ ಮಗ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಯಾಜಕ ಯೆಹೋಯಾದನ ಹೆಂಡತಿಯೂ ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.


ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.


ಕಪ್ಪೆಗಳು ತಮ್ಮನ್ನೂ ತಮ್ಮ ಮನೆಮಾರುಗಳನ್ನೂ ತಮ್ಮ ಪ್ರಜಾಪರಿವಾರಗಳನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವುವು. ಇದರಿಂದ ನಮ್ಮ ದೇವರಾದ ಸರ್ವೇಶ್ವರನಿಗೆ ಸಮಾನರು ಯಾರೂ ಇಲ್ಲವೆಂದು ತಾವೇ ತಿಳಿದುಕೊಳ್ಳುವಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು