Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:15 - ಕನ್ನಡ ಸತ್ಯವೇದವು C.L. Bible (BSI)

15 ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು. ಆಗ ನೀನು ಈವರೆಗೆ ಭೂಮಿಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು; ಆಗ ನೀನು ಈವರೆಗೆ ಭೂವಿುಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನನ್ನ ಶಕ್ತಿಯಿಂದ ನಿನಗೂ ನಿನ್ನ ಜನರಿಗೂ ವ್ಯಾಧಿಯನ್ನು ಬರಮಾಡಿ ನಿಮ್ಮನ್ನು ನಿರ್ಮೂಲ ಮಾಡಬಹುದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ನನ್ನ ಕೈಚಾಚಿ ನಿನ್ನನ್ನೂ, ನಿನ್ನ ಜನರನ್ನೂ ಉಪದ್ರವದಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:15
13 ತಿಳಿವುಗಳ ಹೋಲಿಕೆ  

ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.


ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.


ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಮಾರನೆಯ ದಿನವೇ ಸರ್ವೇಶ್ವರ ಈ ಕಾರ್ಯವನ್ನು ನೆರವೇರಿಸಿದರು. ಈಜಿಪ್ಟಿನವರ ಪಶುಪ್ರಾಣಿಗಳೆಲ್ಲಾ ಸಾಯುತ್ತಾ ಬಂದವು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲ.


ಸರ್ವೇಶ್ವರನು ನಾಡಿನಲ್ಲಿರುವ ನಿನ್ನ ಎಲ್ಲ ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲ ಪ್ರಾಣಿಗಳ ಮೇಲೆ ಕೈಯೆತ್ತಿ ದೊಡ್ಡರೋಗ ಬರುವಂತೆ ಮಾಡುವರೆಂದು ತಿಳಿದುಕೊ.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ನಿಮ್ಮನ್ನು ಮಹಾಶಕ್ತಿ ಹಾಗು ಭುಜಪರಾಕ್ರಮಗಳ ಮೂಲಕ ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ಸರ್ವೇಶ್ವರನಾದ ನನ್ನಲ್ಲೇ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈಮುಗಿದು ಬಲಿಯರ್ಪಿಸಬೇಕು.


ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.


ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು