Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:21 - ಕನ್ನಡ ಸತ್ಯವೇದವು C.L. Bible (BSI)

21 ಮಿಕ್ಕವರು ಆ ಮಾತನ್ನು ಗಮನಕ್ಕೆ ತಂದುಕೊಳ್ಳದೆ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಹೊಲಗದ್ದೆಗಳಲ್ಲೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ ಅವರು ತಮ್ಮ ಆಳುಗಳನ್ನೂ ಪಶುಗಳನ್ನೂ ಅಡವಿಯಲ್ಲೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಇತರರು ಯೆಹೋವನ ಸಂದೇಶವನ್ನು ನಿರ್ಲಕ್ಷ್ಯಮಾಡಿ ತಮ್ಮ ಎಲ್ಲಾ ಗುಲಾಮರನ್ನೂ ಪಶುಗಳನ್ನೂ ಹೊಲಗಳಲ್ಲಿಯೇ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಯೆಹೋವ ದೇವರ ವಾಕ್ಯಕ್ಕೆ ಮನಸ್ಸು ಕೊಡದವರು, ತಮ್ಮ ದಾಸರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:21
11 ತಿಳಿವುಗಳ ಹೋಲಿಕೆ  

ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


ಅದನ್ನು ನೋಡಿ ಚಿಂತಿಸತೊಡಗಿದೆ; ಆ ದೃಶ್ಯದಿಂದ ಈ ಪಾಠ ಕಲಿತೆ:


ದೇವರು ಮನಸ್ಸುಮಾಡಿ ತನ್ನ ಆತ್ಮವನ್ನು ಹಿಂದಕ್ಕೆ ತೆಗೆದುಕೊಂಡನಾದರೆ ತನ್ನ ಶ್ವಾಸವನ್ನು ಹಿಂದಕೆ ಎಳೆದುಕೊಂಡನಾದರೆ,


ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?


ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.


ಆಕೆ ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಮಹಿಳೆಯರು, “ಭಯಪಡಬೇಡ, ಮಗನನ್ನು ಹೆತ್ತಿದ್ದೀ,” ಎಂದು ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ. ಪ್ರತ್ಯುತ್ತರವನ್ನೂ ಕೊಡಲಿಲ್ಲ.


ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು.


ಫರೋಹನ ಸೇವಕರಲ್ಲಿ ಕೆಲವರು ಸರ್ವೇಶ್ವರನ ಈ ಮಾತಿಗೆ ಹೆದರಿ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಬೇಗನೆ ಮನೆಗೆ ಬರಮಾಡಿಕೊಂಡರು.


ಸರ್ವೇಶ್ವರ ಮೋಶೆಗೆ; “ಆಕಾಶದತ್ತ ನಿನ್ನ ಕೈಚಾಚು; ಆಗ ಈಜಿಪ್ಟ್ ದೇಶದಲ್ಲೆಲ್ಲಾ ಆನೆಕಲ್ಲಿನ ಮಳೆ ಬೀಳುವುದು - ಮನುಷ್ಯರ ಮೇಲೂ ಮೃಗಗಳ ಮೇಲೂ ಹೊಲದಲ್ಲಿನ ಪೈರುಪಚ್ಚೆಗಳ ಮೇಲೂ ಬೀಳುವುದು,” ಎಂದು ಹೇಳಿದರು.


ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು