Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:27 - ಕನ್ನಡ ಸತ್ಯವೇದವು C.L. Bible (BSI)

27 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಫರೋಹನು ಮೋಶೆ ಆರೋನರನ್ನು ಕರಿಸಿ ಅವರಿಗೆ - ನಾನು ಅಪರಾಧಿಯೆಂದು ಈಗ ಒಪ್ಪಿಕೊಂಡೆನು; ಯೆಹೋವನು ನ್ಯಾಯವಂತನು, ನಾನೂ ನನ್ನ ಜನರೂ ದೋಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:27
20 ತಿಳಿವುಗಳ ಹೋಲಿಕೆ  

“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ನಮ್ಮ ಪ್ರಭುವಾದರೋ ಸತ್ಯಸ್ವರೂಪನು I ಕಡಿದಿಹನು ದುರುಳರು ಹಾಕಿದ ಕಟ್ಟುಗಳನು II


ಆಗ ಅರಸನೂ ಇಸ್ರಯೇಲ್ ಪ್ರಧಾನರೂ, ಸರ್ವೇಶ್ವರಸ್ವಾಮಿ ನ್ಯಾಯವಂತರೆಂದು ಒಪ್ಪಿಕೊಂಡು ತಮ್ಮನ್ನೇ ತಗ್ಗಿಸಿಕೊಂಡರು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕೂಡಲೆ ಕರೆಯಿಸಿ, “ನಾನು ನಿಮ್ಮ ದೇವರಾದ ಸರ್ವೇಶ್ವರನಿಗೂ ನಿಮಗೂ ದ್ರೋಹಮಾಡಿದ್ದೇನೆ.


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.


ಆದಕಾರಣ ಸರ್ವೇಶ್ವರ ಈ ಕೇಡನ್ನು ಸಕಾಲಕ್ಕೆ ನಮ್ಮ ಮೇಲೆ ಬರಮಾಡಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ತಾವು ಮಾಡುವ ಸಕಲ ಕಾರ್ಯಗಳಲ್ಲೂ ನ್ಯಾಯಸ್ವರೂಪರು. ನಾವೋ ಅವರ ಮಾತನ್ನು ಕೇಳಲಿಲ್ಲ.


ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.


ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.


ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಸಿ, “ನೀವು ಹೋಗಿ ಈ ದೇಶದಲ್ಲೇ ನಿಮ್ಮ ದೇವರಿಗೆ ಬಲಿಯನ್ನೊಪ್ಪಿಸಬಹುದು,” ಎಂದನು.


ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ಅವನಿಗೆ ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದು ನಿಜ,


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು