Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:29 - ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಮೋಶೆಯು ಅವನಿಗೆ, “ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೇ, ಯೆಹೋವ ದೇವರ ಕಡೆಗೆ ನನ್ನ ಕೈಗಳನ್ನು ಚಾಚಿ ಪ್ರಾರ್ಥಿಸುವೆನು. ಭೂಮಿಯು ಯೆಹೋವ ದೇವರದೇ ಎಂದು ನೀನು ತಿಳಿದುಕೊಳ್ಳುವಂತೆ ಗುಡುಗುಗಳು ನಿಂತುಹೋಗುವುವು. ಆಲಿಕಲ್ಲಿನ ಮಳೆಯು ಇನ್ನು ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:29
19 ತಿಳಿವುಗಳ ಹೋಲಿಕೆ  

ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ


ಬಳಿಕ ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ನಿಂತು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:


ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ.


ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.


ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II


ನನಗೆ ಹಸಿವಾದರೆ, ನಿಮಗೆ ತಿಳಿಸಬೇಕಿಲ್ಲ I ಜಗವು, ಅದರದೆಲ್ಲವು ನನ್ನವಾಗಿವೆಯಲ್ಲಾ II


ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ಆಮೇಲೆ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನ್ನೆತ್ತಿ ಹೀಗೆಂದು ಪ್ರಾರ್ಥಿಸಿದೆ:


ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.


ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು