Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:5 - ಕನ್ನಡ ಸತ್ಯವೇದವು C.L. Bible (BSI)

5 ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ಸಮಯದಲ್ಲಿ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ಏನು ನಡೆಯುತ್ತಿದೆಂಬುದರ ಬಗ್ಗೆ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:5
15 ತಿಳಿವುಗಳ ಹೋಲಿಕೆ  

ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.


ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.


ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.


ಮಿಕ್ಕವರು ಆ ಮಾತನ್ನು ಗಮನಕ್ಕೆ ತಂದುಕೊಳ್ಳದೆ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಹೊಲಗದ್ದೆಗಳಲ್ಲೇ ಬಿಟ್ಟರು.


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡನು. ದಾನಿಯೇಲನನ್ನು ಈ ಇಕ್ಕಟ್ಟಿನಿಂದ ತಪ್ಪಿಸಲು ಮನಸ್ಸು ಮಾಡಿಕೊಂಡನು. ಆದರೆ ಹೇಗೆ ರಕ್ಷಿಸುವುದೆಂದು ಸೂರ್ಯಾಸ್ತಮದವರೆಗೂ ಆಲೋಚಿಸುತ್ತಾ ಇದ್ದನು.


ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.


ಕಣ್ಣಿಟ್ಟು ನೋಡಿರಿ ಅದರ ಕೋಟೆಗಳನು I ಚೆನ್ನಾಗಿ ಗಮನಿಸಿರಿ ಅದರ ಪ್ರಾಕಾರಗಳನು II


ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು.


“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು