Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಹಗ್ಗಾಯನು ಮುಂದುವರಿಸುತ್ತಾ, “ಸರ್ವೇಶ್ವರ ಇಂತೆನ್ನುತ್ತಾರೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಹೊಲೆಯಾಗಿಯೇ ಇದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಹಗ್ಗಾಯನು ಆ ಪ್ರಸ್ತಾಪವೆತ್ತಿ ಹೀಗಂದನು - ಯೆಹೋವನು ಇಂತೆನ್ನುತ್ತಾನೆ - ಅದರಂತೆ ಈ ಪ್ರಜೆಯು, ಅದರಂತೆ ಈ ಜನಾಂಗವು, ಅದರಂತೆ ಇವರು ಕೈ ಹಾಕುವ ಎಲ್ಲಾ ಕೆಲಸವು, ಅಲ್ಲಿ ತಂದಿಡುವ ನ್ಯೆವೇದ್ಯವು ನನಗೆ ಅಶುದ್ಧವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ ಪವಿತ್ರರಲ್ಲ. ಆದ್ದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಹಗ್ಗಾಯನು ಮುಂದುವರಿಸಿ ಹೇಳಿದ್ದೇನೆಂದರೆ, “ಈ ಜನರೂ, ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಅರ್ಪಿಸುವಂಥಾದ್ದು ಅಶುದ್ಧವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:14
11 ತಿಳಿವುಗಳ ಹೋಲಿಕೆ  

ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.


ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.


ಇನ್ನವರು ಸರ್ವೇಶ್ವರಸ್ವಾಮಿಗೆ ನೈವೇದ್ಯವಾಗಿ ದ್ರಾಕ್ಷಾರಸವನ್ನು ಸುರಿಯರು. ಅವರ ಯಜ್ಞಗಳು ಆ ಸ್ವಾಮಿಗೆ ಮೆಚ್ಚುಗೆಯಾಗುವುದಿಲ್ಲ. ಅವರ ಆಹಾರ ಹೆಣದ ಮನೆಯ ಆಹಾರದಂತಿರುವುದು. ಅದನ್ನು ತಿನ್ನುವವರೆಲ್ಲರು ಅಶುದ್ಧರಾಗುವರು. ಅದು ಹೊಟ್ಟೆತುಂಬಲು ಮಾತ್ರ ಸರಿಯೇ ಹೊರತು ದೇವಾಲಯದಲ್ಲಿ ಮಾಡುವ ಅರ್ಪಣೆಗೆ ಸಲ್ಲದು.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು